Categories: Home

ದಾದಿಯರು ಆರೋಗ್ಯ ವ್ಯವಸ್ಥೆಗೆ ಬೆನ್ನೆಲುಬಾಗಿದ್ದಾರೆ- ಸಚಿವ ದಿನೇಶ್‌ಗುಂಡೂರಾವ್‌

ಬೆಂಗಳೂರು: ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಎಚ್‌ಸಿಜಿ ಆಯೋಜಿಸಿದ್ದ ಭಾರತದ ಅತಿದೊಡ್ಡ ಕ್ಯಾನ್ಸರ್ ಕೇರ್ ನೆಟ್‌ವರ್ಕ್ನ “5ನೇ ವಾರ್ಷಿಕ ರಾಷ್ಟ್ರೀಯ ನರ್ಸಿಂಗ್ ಕಾನ್ಫರೆನ್ಸ್- 2024” ನನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯರಷ್ಟೇ ಪ್ರಬುದ್ಧರಾಗಿ ದಾದಿಯರು ನಮ್ಮ ಆರೋಗ್ಯದ ಆರೈಕೆ ಮಾಡುತ್ತಿದ್ದು, ಇಡೀ ಆರೋಗ್ಯ ವ್ಯವಸ್ಥೆಗೇ ಅವರು ಬೆನ್ನೆಲುಬಾಗಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ದಾದಿಯರು ತಮ್ಮ ಜೀವದ ಆಸೆ ಬದಿಗಿಟ್ಟು ರೋಗಿಗಳ ಸೇವೆ ಮಾಡಿದ್ದಾರೆ ಎಂದರು.

ವೈದ್ಯರು ಚಿಕಿತ್ಸೆ ನೀಡಿದರೆ, ದಾದಿಯರು ರೋಗಿಯು ಆಸ್ಪತ್ರೆಯಿಂದ ಬಿಡುಗಡೆ ಆಗುವವರೆಗೂ ಆರೈಕೆ ಮಾಡುತ್ತಾರೆ. ದಾದಿಯರ ಕೆಲಸ ಗೌರವಾನ್ವಿತ ವೃತ್ತಿಯಾಗಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು. ದಾದಿಯರ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತರಬೇತಿಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಭಾರತವು ನರ್ಸಿಂಗ್ ವೃತ್ತಿಯಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ, ನಮ್ಮ ದಾದಿಯರು ತಮ್ಮ ಪರಿಣತಿ ಮತ್ತು ಬದ್ಧತೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ನಾವು ಅವರಿಗೆ ನೀಡಬೇಕಾದ ತರಬೇತಿ, ಸೌಲಭ್ಯಗಳು ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಮೂಲಕ ಅವರಿಗೆ ಸಹಕಾರಿಯಾಗಿ ನಿಲ್ಲಬೇಕು ಎಂದರು,

ಎಚ್‌ಸಿಜಿ ಸಿಇಒ ರಾಜ್ ಗೋರ್ ಮಾತನಾಡಿ, ದಾದಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಈ ಅಧಿವೇಶನ ಹೆಚ್ಚು ಅವಶ್ಯಕ. ಎಚ್‌ಸಿಜಿ ದಾದಿಯರಿಗೆ ವಿಶೇಷ ಸ್ಥಾನಮಾನ ನೀಡಿದ್ದು, ಅವರಿಗೆ ಕಾಲಕ್ಕೆ ತಕ್ಕಂತೆ ತರಬೇತಿ ನೀಡುವ ಮೂಲಕ ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಸಮಾವೇಶದಲ್ಲಿ ಅನೇಕ ವಿಷಯಗಳ ಮೇಲೆ ಚರ್ಷೆ ನಡೆಸಲಾಯಿತು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

4 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

4 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

9 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

18 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago