ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು ಸಮಾಜಕ್ಕೆ ದಾದಿಯರು ನೀಡುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ, ಗೌರವಿಸುವ ದಿನವಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು..
ಆಸ್ಪತ್ರೆಗಳಲ್ಲಿ ರೋಗಿಗಳ ಪಾಲಿನ ಆಶಾ ಕಿರಣ, ಕುಟುಂಬ ಸದಸ್ಯರಂತೆ ಶುಶ್ರೂಷೆ ಮಾಡುವ ದಾದಿಯರನ್ನು ಸ್ಮರಿಸುವ ಹಾಗೂ ಅವರ ಸೇವಾ ಕೈಂಕರ್ಯಕ್ಕೆ ನಾವೆಲ್ಲರು ಸಲಾಂ ಹೇಳಲೇಬೇಕು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಷ್ಟೆ ದಾದಿಯರ ಶ್ರಮವೂ ಇದೆ. ರೋಗಿಗಳ ಆರೈಕೆ, ಚಿಕಿತ್ಸೆ ವೇಳೆ ಸಹಕಾರ ಹಾಗೂ ಮಾನಸಿಕ ಧೈರ್ಯ ತುಂಬುವ ಕೆಲಸದಲ್ಲಿ ದಾದಿಯರ ಸೇವೆ ಅಮೂಲ್ಯವಾಗಿದೆ ಎಂದು ತಿಳಿಸಿದರು.
ದಾದಿಯರ ಸೇವೆ, ತ್ಯಾಗ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರ ಮಹತ್ವದ ಪಾತ್ರವನ್ನು ಎಲ್ಲರು ಸ್ಮರಿಸಲೇಬೇಕು ಎಂದರು.
ಸಿಎಂಒ ಡಾ.ರಮೇಶ್, ವೈದ್ಯರಾದ ಡಾ.ಮಂಜುನಾಥ್, ಡಾ. ನಿರಾಂಜನ್, ಡಾ.ರಾಜು, ಡಾ. ಗಾಯತ್ರಿ, ಡಾ.ಪರಮೇಶ್ವರ್, ಡಾ.ಸವಿತಾ, ಹಿರಿಯ ಶುಶ್ರೂಷಾಧಿಕಾರಿ ಶೈಲಜಾ, ವಂದನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…