ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು ಸಮಾಜಕ್ಕೆ ದಾದಿಯರು ನೀಡುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ, ಗೌರವಿಸುವ ದಿನವಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು..
ಆಸ್ಪತ್ರೆಗಳಲ್ಲಿ ರೋಗಿಗಳ ಪಾಲಿನ ಆಶಾ ಕಿರಣ, ಕುಟುಂಬ ಸದಸ್ಯರಂತೆ ಶುಶ್ರೂಷೆ ಮಾಡುವ ದಾದಿಯರನ್ನು ಸ್ಮರಿಸುವ ಹಾಗೂ ಅವರ ಸೇವಾ ಕೈಂಕರ್ಯಕ್ಕೆ ನಾವೆಲ್ಲರು ಸಲಾಂ ಹೇಳಲೇಬೇಕು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಷ್ಟೆ ದಾದಿಯರ ಶ್ರಮವೂ ಇದೆ. ರೋಗಿಗಳ ಆರೈಕೆ, ಚಿಕಿತ್ಸೆ ವೇಳೆ ಸಹಕಾರ ಹಾಗೂ ಮಾನಸಿಕ ಧೈರ್ಯ ತುಂಬುವ ಕೆಲಸದಲ್ಲಿ ದಾದಿಯರ ಸೇವೆ ಅಮೂಲ್ಯವಾಗಿದೆ ಎಂದು ತಿಳಿಸಿದರು.
ದಾದಿಯರ ಸೇವೆ, ತ್ಯಾಗ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರ ಮಹತ್ವದ ಪಾತ್ರವನ್ನು ಎಲ್ಲರು ಸ್ಮರಿಸಲೇಬೇಕು ಎಂದರು.
ಸಿಎಂಒ ಡಾ.ರಮೇಶ್, ವೈದ್ಯರಾದ ಡಾ.ಮಂಜುನಾಥ್, ಡಾ. ನಿರಾಂಜನ್, ಡಾ.ರಾಜು, ಡಾ. ಗಾಯತ್ರಿ, ಡಾ.ಪರಮೇಶ್ವರ್, ಡಾ.ಸವಿತಾ, ಹಿರಿಯ ಶುಶ್ರೂಷಾಧಿಕಾರಿ ಶೈಲಜಾ, ವಂದನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…