ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು ಸಮಾಜಕ್ಕೆ ದಾದಿಯರು ನೀಡುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ, ಗೌರವಿಸುವ ದಿನವಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು..
ಆಸ್ಪತ್ರೆಗಳಲ್ಲಿ ರೋಗಿಗಳ ಪಾಲಿನ ಆಶಾ ಕಿರಣ, ಕುಟುಂಬ ಸದಸ್ಯರಂತೆ ಶುಶ್ರೂಷೆ ಮಾಡುವ ದಾದಿಯರನ್ನು ಸ್ಮರಿಸುವ ಹಾಗೂ ಅವರ ಸೇವಾ ಕೈಂಕರ್ಯಕ್ಕೆ ನಾವೆಲ್ಲರು ಸಲಾಂ ಹೇಳಲೇಬೇಕು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಷ್ಟೆ ದಾದಿಯರ ಶ್ರಮವೂ ಇದೆ. ರೋಗಿಗಳ ಆರೈಕೆ, ಚಿಕಿತ್ಸೆ ವೇಳೆ ಸಹಕಾರ ಹಾಗೂ ಮಾನಸಿಕ ಧೈರ್ಯ ತುಂಬುವ ಕೆಲಸದಲ್ಲಿ ದಾದಿಯರ ಸೇವೆ ಅಮೂಲ್ಯವಾಗಿದೆ ಎಂದು ತಿಳಿಸಿದರು.
ದಾದಿಯರ ಸೇವೆ, ತ್ಯಾಗ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರ ಮಹತ್ವದ ಪಾತ್ರವನ್ನು ಎಲ್ಲರು ಸ್ಮರಿಸಲೇಬೇಕು ಎಂದರು.
ಸಿಎಂಒ ಡಾ.ರಮೇಶ್, ವೈದ್ಯರಾದ ಡಾ.ಮಂಜುನಾಥ್, ಡಾ. ನಿರಾಂಜನ್, ಡಾ.ರಾಜು, ಡಾ. ಗಾಯತ್ರಿ, ಡಾ.ಪರಮೇಶ್ವರ್, ಡಾ.ಸವಿತಾ, ಹಿರಿಯ ಶುಶ್ರೂಷಾಧಿಕಾರಿ ಶೈಲಜಾ, ವಂದನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…