ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ: ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ- ಡಾ. ಪಿ.ಪಿ ವಾವ

ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗಿಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಗಳನ್ನು ಪಾವತಿಸಲು ತಾಕೀತು ಮಾಡಲಾಗಿದೆ ಎಂದು ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಡಾ. ಪಿ.ಪಿ. ವಾವ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೌರ ಕಾರ್ಮಿಕರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಎಷ್ಟೇ ಒತ್ತಾಯಿಸಿದರೂ ಮ್ಯಾನ್ ಹೋಲ್ ಗಳ ಒಳಗೆ ಇಳಿಯಬಾರದು ಅದಕ್ಕಾಗಿಯೇ ಇರುವ ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರಗಳನ್ನು ಬಳಸಬೇಕು ಹಾಗೂ ಇತ್ತೀಚಿಗೆ ರೋಬೋಟ್ಗಳು ಬಂದಿದ್ದು, ಅವುಗಳ ಸಹಾಯದಿಂದ ಮ್ಯಾನ್ಹೋಲ್ ಗಳನ್ನು ಸ್ವಚ್ಚ ಮಾಡಬಹುದಾಗಿದೆ ಎಂದರು.

ಯಂತ್ರಗಳ ಖರೀದಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಹಣಕಾಸಿನ ಕೊರತೆಯಿದ್ದರೆ ಸ್ಥಳೀಯ ಕಾರ್ಖಾನೆಗಳ ಸಿಎಸ್ಆರ್ ನಿಧಿಯ ನೆರವು ಪಡೆಯಿರಿ ಎಂದರು.

ಸಫಾಯಿ ಕರ್ಮಚಾರಿಗಳ ಗುರುತಿನ ಪತ್ರಗಳನ್ನು ವೀಕ್ಷಿಸಿದ ಅವರು ಗುರುತಿನ ಪತ್ರದಲ್ಲಿ ಕಾರ್ಮಿಕರ ಪಿ.ಎಫ್. ಸಂಖ್ಯೆ, ಇ.ಎಸ್.ಐ ಸಂಖ್ಯೆ ಹಾಗೂ ಬ್ಲಡ್ ಗ್ರೂಪ್ ಸೇರಿ ಅಗತ್ಯ ಮಾಹಿತಿ ಇರುವುದು ಕಡ್ಡಾಯ ಎಂದರು.

ಎಲ್ಲಾ ಕಾರ್ಮಿಕರಿಗೂ ಸಮವಸ್ತ್ರ, ಮಾಸ್ಕ್, ಹೆಲ್ತ್ ಚೆಕಪ್, ಗಂಬೂಟ್, ಬೆಳಗಿನ ಉಪಾಹಾರ ನೀಡುವ ಬಗೆಗೆ ಖಚಿತಪಡಿಸಿಕೊಂಡರು ಹಾಗೂ ಕಾರ್ಮಿಕ ಕಾನೂನಿನ ಪ್ರಕಾರವಾಗಿ ಸಂಬಳ ಪಾವತಿಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು ಮತ್ತು ಅನುಕಂಪದ ಆಧಾರದಡಿ ಕುಟುಂಬಸ್ಥರಿಗೆ ಉದ್ಯೋಗ ನೀಡಿರುವ ಬಗೆಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.

ಅಧಿಕಾರಿಗಳು ಪ್ರತಿಕ್ರಿಯಿಸಿ ಎಲ್ಲಾ ಪೌರಕಾರ್ಮಿಕರಿಗೂ‌ 2 ಜೊತೆ ಸಮವಸ್ತ್ರ ವಿತರಿಸಿದ್ದು, ವಿಜಯಪುರ ಸಿಎಂಸಿಯಲ್ಲಿ 5 ಜೊತೆ ಸಮವಸ್ತ್ರ ವಿತರಿಸಲಾಗಿದೆ ಎಂದರು.
ಹೊಸಕೋಟೆ ಸ್ಥಳೀಯ ಸಂಸ್ಥೆ ಅಧಿಕಾರಿ ಮಾಹಿತಿ ನೀಡಿ ಜಿ+2 ಮಾದರಿಯಲ್ಲಿ 32 ಮನೆ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದರು.

ಎಲ್ಲಾ ಪೌರ ಕಾರ್ಮಿಕರಿಗೂ ಮನೆ ನೀಡಿ, ಪೌರಕಾರ್ಮಿಕರಿಗೆ ಮನೆ ನೀಡಿದರೆ ಅವರ ಕುಟುಂಬಕ್ಕೆ ಒಳ್ಳೆಯದಾಗುತ್ತದೆ, ಸರ್ಕಾರವು ಸಾಕಷ್ಟು ಹಣ ನೀಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಆಶ್ರಯ ವಸತಿ ಯೋಜನೆಗಳನ್ನು ಬಳಸಿಕೊಂಡು‌ ಉತ್ತಮ ಗುಣಮಟ್ಟದ ಮನೆಗಳನ್ನು ನೀಡಿ ಎಂದರು.

ಈ ಸಭೆಯಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಗಿರಿಧರನಾಥ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್., ಡಿಎಸ್ಪಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಟಿ.ಎಲ್.ಎಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಸೇರಿ ಜಿಲ್ಲಾ ಪುರಸಭೆಗಳ ಮುಖ್ಯಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

2 minutes ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

3 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

8 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

19 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

19 hours ago