ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ: ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ- ಡಾ. ಪಿ.ಪಿ ವಾವ

ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗಿಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಗಳನ್ನು ಪಾವತಿಸಲು ತಾಕೀತು ಮಾಡಲಾಗಿದೆ ಎಂದು ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಡಾ. ಪಿ.ಪಿ. ವಾವ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೌರ ಕಾರ್ಮಿಕರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಎಷ್ಟೇ ಒತ್ತಾಯಿಸಿದರೂ ಮ್ಯಾನ್ ಹೋಲ್ ಗಳ ಒಳಗೆ ಇಳಿಯಬಾರದು ಅದಕ್ಕಾಗಿಯೇ ಇರುವ ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರಗಳನ್ನು ಬಳಸಬೇಕು ಹಾಗೂ ಇತ್ತೀಚಿಗೆ ರೋಬೋಟ್ಗಳು ಬಂದಿದ್ದು, ಅವುಗಳ ಸಹಾಯದಿಂದ ಮ್ಯಾನ್ಹೋಲ್ ಗಳನ್ನು ಸ್ವಚ್ಚ ಮಾಡಬಹುದಾಗಿದೆ ಎಂದರು.

ಯಂತ್ರಗಳ ಖರೀದಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಹಣಕಾಸಿನ ಕೊರತೆಯಿದ್ದರೆ ಸ್ಥಳೀಯ ಕಾರ್ಖಾನೆಗಳ ಸಿಎಸ್ಆರ್ ನಿಧಿಯ ನೆರವು ಪಡೆಯಿರಿ ಎಂದರು.

ಸಫಾಯಿ ಕರ್ಮಚಾರಿಗಳ ಗುರುತಿನ ಪತ್ರಗಳನ್ನು ವೀಕ್ಷಿಸಿದ ಅವರು ಗುರುತಿನ ಪತ್ರದಲ್ಲಿ ಕಾರ್ಮಿಕರ ಪಿ.ಎಫ್. ಸಂಖ್ಯೆ, ಇ.ಎಸ್.ಐ ಸಂಖ್ಯೆ ಹಾಗೂ ಬ್ಲಡ್ ಗ್ರೂಪ್ ಸೇರಿ ಅಗತ್ಯ ಮಾಹಿತಿ ಇರುವುದು ಕಡ್ಡಾಯ ಎಂದರು.

ಎಲ್ಲಾ ಕಾರ್ಮಿಕರಿಗೂ ಸಮವಸ್ತ್ರ, ಮಾಸ್ಕ್, ಹೆಲ್ತ್ ಚೆಕಪ್, ಗಂಬೂಟ್, ಬೆಳಗಿನ ಉಪಾಹಾರ ನೀಡುವ ಬಗೆಗೆ ಖಚಿತಪಡಿಸಿಕೊಂಡರು ಹಾಗೂ ಕಾರ್ಮಿಕ ಕಾನೂನಿನ ಪ್ರಕಾರವಾಗಿ ಸಂಬಳ ಪಾವತಿಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು ಮತ್ತು ಅನುಕಂಪದ ಆಧಾರದಡಿ ಕುಟುಂಬಸ್ಥರಿಗೆ ಉದ್ಯೋಗ ನೀಡಿರುವ ಬಗೆಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.

ಅಧಿಕಾರಿಗಳು ಪ್ರತಿಕ್ರಿಯಿಸಿ ಎಲ್ಲಾ ಪೌರಕಾರ್ಮಿಕರಿಗೂ‌ 2 ಜೊತೆ ಸಮವಸ್ತ್ರ ವಿತರಿಸಿದ್ದು, ವಿಜಯಪುರ ಸಿಎಂಸಿಯಲ್ಲಿ 5 ಜೊತೆ ಸಮವಸ್ತ್ರ ವಿತರಿಸಲಾಗಿದೆ ಎಂದರು.
ಹೊಸಕೋಟೆ ಸ್ಥಳೀಯ ಸಂಸ್ಥೆ ಅಧಿಕಾರಿ ಮಾಹಿತಿ ನೀಡಿ ಜಿ+2 ಮಾದರಿಯಲ್ಲಿ 32 ಮನೆ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದರು.

ಎಲ್ಲಾ ಪೌರ ಕಾರ್ಮಿಕರಿಗೂ ಮನೆ ನೀಡಿ, ಪೌರಕಾರ್ಮಿಕರಿಗೆ ಮನೆ ನೀಡಿದರೆ ಅವರ ಕುಟುಂಬಕ್ಕೆ ಒಳ್ಳೆಯದಾಗುತ್ತದೆ, ಸರ್ಕಾರವು ಸಾಕಷ್ಟು ಹಣ ನೀಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಆಶ್ರಯ ವಸತಿ ಯೋಜನೆಗಳನ್ನು ಬಳಸಿಕೊಂಡು‌ ಉತ್ತಮ ಗುಣಮಟ್ಟದ ಮನೆಗಳನ್ನು ನೀಡಿ ಎಂದರು.

ಈ ಸಭೆಯಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಗಿರಿಧರನಾಥ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್., ಡಿಎಸ್ಪಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಟಿ.ಎಲ್.ಎಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಸೇರಿ ಜಿಲ್ಲಾ ಪುರಸಭೆಗಳ ಮುಖ್ಯಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

5 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

9 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

10 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

13 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago