ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಅತಿ ವೇಗವಾಗಿ ಸಂಚರಿಸುವ ವಾಹನಗಳ ಅಟ್ಟಹಾಸಕ್ಕೆ ಅಮಾಯಕರ ಜೀವಗಳು ಬಲಿಯಾಗುತ್ತಿವೆ.
ಇಂದು ಸಂಜೆ ಚಿಕ್ಕಬೆಳವಂಗಲ ಸಮೀಪ ಹೆದ್ದಾರಿ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಚಿಕ್ಕಬೆಳವಂಗಲ ನಿವಾಸಿ ರತ್ಮಮ್ಮ (60) ಎಂದು ಗುರುತಿಸಲಾಗಿದೆ.
ದಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರದ ಕಡೆಗೆ ವೇಗವಾಗಿ ಬರುತ್ತಿದ್ದ ಕಾರು, ಹೆದ್ದಾರಿ ದಾಟುತ್ತಿದ್ದ ರತ್ಮಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಇದೇ ಹೆದ್ದಾರಿಯಲ್ಲಿ ಮೇ 26ರ ಮುಂಜಾನೆ ಮೂಗೇನಹಳ್ಳಿ ಬಾರೆ ಗುಂಡಹಳ್ಳಿ ಕ್ರಾಸ್ ಸಮೀಪ ಹಿಟ್ ಆ್ಯಂಡ್ ರನ್ ಪ್ರಕರಣವೂ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
ಸತತ ಅಪಘಾತಗಳಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಹೆದ್ದಾರಿಯಲ್ಲಿ ವೇಗ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…