ದಾಳಿಂಬೆ ಬೆಳೆಯನ್ನು ಸಮಗ್ರವಾಗಿ ನಿರ್ವಹಣೆ ಮಾಡಲು ರೈತರಿಗೆ ಅವಶ್ಯಕ ಜ್ಞಾನ ಅಗತ್ಯವಿದ್ದು ವಿಚಾರ ಸಂಕಿರಣ ಕಾರ್ಯಕ್ರಮಗಳು ಸಹಾಯವಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ “ದಾಳಿಂಬೆ ಬೆಳೆಯ ಕ್ಷೇತ್ರೋತ್ಸವ ಮತ್ತು ವಿಚಾರ ಸಂಕಿರಣ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಊಧ್ಘಾಟಿಸಿ ಅವರು ಮಾತನಾಡಿದರು.
ದಾಳಿಂಬೆ ಬೆಳೆ ನಿರ್ವಹಣೆ ಜ್ಞಾನ ಪಡೆಯಲು ರೈತರಿಗೆ ಸ್ಥಳೀಯವಾಗಿ ವಿಚಾರ ಸಂಕೀರ್ಣ ಕಾರ್ಯಕ್ರಮಗಳು ಆಯೋಜಿಸುವುದರಿಂದ ಹೆಚ್ಚಿನ ಉಪಯೋಗವಾಗುತ್ತದೆ.
ಜಿಲ್ಲೆಯಲ್ಲಿ ಶೇಕಡ 18% ರಷ್ಟು ತೋಟಗಾರಿಕೆ ಪ್ರದೇಶವಿದ್ದು, 27.784 ಹೆಕ್ಟೇರ್ ನಲ್ಲಿ ವಿವಿಧ ತೊಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. 378.12 ಹೆಕ್ಟೇರ್ ನಷ್ಟು ದಾಳಿಂಬೆ ಬೆಳೆಯುತ್ತಿದ್ದಾರೆ. ಅದರಲ್ಲಿ 200 ಹೆಕ್ಟೇರ್ ನಷ್ಟು ದೇವನಹಳ್ಳಿ ಯಲ್ಲಿ ದಾಳಿಂಬೆ ಬೆಳೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ತೋಟಗಾರಿಕೆ ವಿಜ್ಞಾನಿ ಡಾ.ಗಿರಿಗೌಡ ಮಂಜುನಾಥ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದಾಳಿಂಬೆ ಬೆಳೆ ಗಿಡ ನಾಟಿ ಮಾಡುವ ವಿಧಾನ, ಗೊಬ್ಬರ ಬಳಕೆ ವಿಧಾನ, ರೋಗ ನಿರ್ವಹಣೆ, ಔಷಧಿ ಸಿಂಪರಣೆ, ನೀರು ನಿರ್ವಹಣೆ, ಕೀಟ ನಿರ್ವಹಣೆ, ಕಟಾವು ವಿಧಾನದ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿ ಹೆಚ್ಚಿನ ಮಾಹಿತಿಗಾಗಿ 9916219697 ಸಂಖ್ಯೆಗೆ ವಾಟ್ಸಾಪ್ ಅಥವಾ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಕಂಪನಿಗಳ ರಸಗೊಬ್ಬರ, ಔಷಧಿಗಳು, ಯಂತ್ರೋಪಕರಣಗನ್ನು ಪ್ರದರ್ಶಿಸಿ ರೈತರಿಗೆ ಮಾಹಿತಿ ನೀಡಲಾಯಿತು.
ದೇವನಹಳ್ಳಿ ಹಿರಿಯ ತೋಟಗಾರಿಕೆ ನಿರ್ದೇಶಕರಾದ ಮಲ್ಲಿಕಾರ್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ನಿರ್ದೇಶಕ (ರಾಜ್ಯ ವಲಯ) ಗೋಪಾಲ್, ಬಿಜ್ಜವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲೆಯ ರೈತರು ಹಾಗೂ ರಸಗೊಬ್ಬರ, ಔಷಧಿ ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…