ತಾಲೂಕಿನಲ್ಲಿ ಹಾದುಹೋಗುವ ವಿವಿಧ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಅಪಘಾತ ಭಯದಲ್ಲಿ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ವೀಕೆಂಡ್ನಲ್ಲಿ ಪ್ರಮುಖ ಹೆದ್ದಾರಿಗಳಲ್ಲಿ ಪುಂಡರು ನಂದಿ ಬೆಟ್ಟ- ದೊಡ್ಡಬಳ್ಳಾಪುರ, ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ – ಹಿಂದೂಪುರ ಹೆದ್ದಾರಿ ಯುದ್ದಕ್ಕೂ ಬೈಕ್ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿರುವುದರಿಂದ ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.
ಕೆಲ ಹೆದ್ದಾರಿಗಳಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಹೊಸಕೋಟೆ- ದೊಡ್ಡಬಳ್ಳಾಪುರ. ನಡುವಿನ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಇನ್ನೂ ಈ ಪುಂಡರ ಬಂಧನಕ್ಕೆ ಪೊಲೀಸರು ಮುಂದಾದರು ವೇಗವಾಗಿ ವಾಹನಗಳಲ್ಲಿ ಪರಾರಿಯಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ.
ವ್ಹೀಲಿಂಗ್ ಮಾಡಲು ಬಳಸುವ ಬಹುತೇಕ ವಾಹನಗಳಿಗೆ ನಂಬರ್ ಪ್ಲೇಟ್ ಇರದೇ ಇರುವುದು ಪುಂಡರ ಬಂಧಿಸಲು ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಒಂದು ವೇಳೆ ಪುಂಡರ ಬೆನ್ನತ್ತಿ ಪ್ರಾಣ ಒತ್ತೆಯನ್ನಿಟ್ಟು ಹಿಡಿದರು… ಕೆಲ ಪುಡಾರಿಗಳು ಪುಂಡರನ್ನು ಬಿಡುವಂತೆ ಒತ್ತಡ ಹೇರುತ್ತಾರೆ ಎಂಬ ಬೇಸರ ಪೊಲೀಸರದ್ದಾಗಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…