ತಾಲೂಕಿನಲ್ಲಿ ಹಾದುಹೋಗುವ ವಿವಿಧ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಅಪಘಾತ ಭಯದಲ್ಲಿ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ವೀಕೆಂಡ್ನಲ್ಲಿ ಪ್ರಮುಖ ಹೆದ್ದಾರಿಗಳಲ್ಲಿ ಪುಂಡರು ನಂದಿ ಬೆಟ್ಟ- ದೊಡ್ಡಬಳ್ಳಾಪುರ, ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ – ಹಿಂದೂಪುರ ಹೆದ್ದಾರಿ ಯುದ್ದಕ್ಕೂ ಬೈಕ್ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿರುವುದರಿಂದ ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.
ಕೆಲ ಹೆದ್ದಾರಿಗಳಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಹೊಸಕೋಟೆ- ದೊಡ್ಡಬಳ್ಳಾಪುರ. ನಡುವಿನ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಇನ್ನೂ ಈ ಪುಂಡರ ಬಂಧನಕ್ಕೆ ಪೊಲೀಸರು ಮುಂದಾದರು ವೇಗವಾಗಿ ವಾಹನಗಳಲ್ಲಿ ಪರಾರಿಯಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ.
ವ್ಹೀಲಿಂಗ್ ಮಾಡಲು ಬಳಸುವ ಬಹುತೇಕ ವಾಹನಗಳಿಗೆ ನಂಬರ್ ಪ್ಲೇಟ್ ಇರದೇ ಇರುವುದು ಪುಂಡರ ಬಂಧಿಸಲು ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಒಂದು ವೇಳೆ ಪುಂಡರ ಬೆನ್ನತ್ತಿ ಪ್ರಾಣ ಒತ್ತೆಯನ್ನಿಟ್ಟು ಹಿಡಿದರು… ಕೆಲ ಪುಡಾರಿಗಳು ಪುಂಡರನ್ನು ಬಿಡುವಂತೆ ಒತ್ತಡ ಹೇರುತ್ತಾರೆ ಎಂಬ ಬೇಸರ ಪೊಲೀಸರದ್ದಾಗಿದೆ.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…