ತಾಲೂಕಿನಲ್ಲಿ ಹಾದುಹೋಗುವ ವಿವಿಧ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಅಪಘಾತ ಭಯದಲ್ಲಿ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ವೀಕೆಂಡ್ನಲ್ಲಿ ಪ್ರಮುಖ ಹೆದ್ದಾರಿಗಳಲ್ಲಿ ಪುಂಡರು ನಂದಿ ಬೆಟ್ಟ- ದೊಡ್ಡಬಳ್ಳಾಪುರ, ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ – ಹಿಂದೂಪುರ ಹೆದ್ದಾರಿ ಯುದ್ದಕ್ಕೂ ಬೈಕ್ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿರುವುದರಿಂದ ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.
ಕೆಲ ಹೆದ್ದಾರಿಗಳಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಹೊಸಕೋಟೆ- ದೊಡ್ಡಬಳ್ಳಾಪುರ. ನಡುವಿನ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಇನ್ನೂ ಈ ಪುಂಡರ ಬಂಧನಕ್ಕೆ ಪೊಲೀಸರು ಮುಂದಾದರು ವೇಗವಾಗಿ ವಾಹನಗಳಲ್ಲಿ ಪರಾರಿಯಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ.
ವ್ಹೀಲಿಂಗ್ ಮಾಡಲು ಬಳಸುವ ಬಹುತೇಕ ವಾಹನಗಳಿಗೆ ನಂಬರ್ ಪ್ಲೇಟ್ ಇರದೇ ಇರುವುದು ಪುಂಡರ ಬಂಧಿಸಲು ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಒಂದು ವೇಳೆ ಪುಂಡರ ಬೆನ್ನತ್ತಿ ಪ್ರಾಣ ಒತ್ತೆಯನ್ನಿಟ್ಟು ಹಿಡಿದರು… ಕೆಲ ಪುಡಾರಿಗಳು ಪುಂಡರನ್ನು ಬಿಡುವಂತೆ ಒತ್ತಡ ಹೇರುತ್ತಾರೆ ಎಂಬ ಬೇಸರ ಪೊಲೀಸರದ್ದಾಗಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…