ದಿನೇ ದಿನೇ ಹೆಚ್ಚುತ್ತಿರುವ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್: ಅಪಘಾತ ಭಯದಲ್ಲಿ ವಾಹನ ಸವಾರರು

ತಾಲೂಕಿನಲ್ಲಿ ಹಾದುಹೋಗುವ ವಿವಿಧ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ ದಿನೇ‌ದಿನೇ ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಅಪಘಾತ ಭಯದಲ್ಲಿ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ವೀಕೆಂಡ್​ನಲ್ಲಿ ಪ್ರಮುಖ ಹೆದ್ದಾರಿಗಳಲ್ಲಿ ಪುಂಡರು ನಂದಿ ಬೆಟ್ಟ- ದೊಡ್ಡಬಳ್ಳಾಪುರ, ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ – ಹಿಂದೂಪುರ ಹೆದ್ದಾರಿ ಯುದ್ದಕ್ಕೂ ಬೈಕ್ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿರುವುದರಿಂದ ಇತರೆ ವಾಹನ‌ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.

ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಕೆಲ ಹೆದ್ದಾರಿಗಳಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಹೊಸಕೋಟೆ- ದೊಡ್ಡಬಳ್ಳಾಪುರ. ನಡುವಿನ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

ಇನ್ನೂ ಈ ಪುಂಡರ ಬಂಧನಕ್ಕೆ ಪೊಲೀಸರು ಮುಂದಾದರು ವೇಗವಾಗಿ ವಾಹನಗಳಲ್ಲಿ ಪರಾರಿಯಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ.

ವ್ಹೀಲಿಂಗ್ ಮಾಡಲು ಬಳಸುವ ಬಹುತೇಕ ವಾಹನಗಳಿಗೆ ನಂಬರ್ ಪ್ಲೇಟ್ ಇರದೇ ಇರುವುದು ಪುಂಡರ ಬಂಧಿಸಲು ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಒಂದು ವೇಳೆ ಪುಂಡರ ಬೆನ್ನತ್ತಿ ಪ್ರಾಣ ಒತ್ತೆಯನ್ನಿಟ್ಟು ಹಿಡಿದರು… ಕೆಲ ಪುಡಾರಿಗಳು ಪುಂಡರನ್ನು ಬಿಡುವಂತೆ ಒತ್ತಡ ಹೇರುತ್ತಾರೆ ಎಂಬ ಬೇಸರ ಪೊಲೀಸರದ್ದಾಗಿದೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

29 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

5 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

7 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

8 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

11 hours ago