2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಲಿಂಕ್ https://sw.kar.nic.in ನಲ್ಲಿ ಆನ್ ಲೈನ್ ಮೂಲಕ ಸೆಪ್ಟೆಂಬರ್ 05ರವರೆಗೆ ವಿಸ್ತರಿಸಲಾಗಿದ್ದು, ಯಾತ್ರಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.”
*ಮಾರ್ಗಸೂಚಿಗಳು:-*
• ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
• ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
• ಯಾತ್ರಾರ್ಥಿಗಳಿಗೆ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು.
• ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
• ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾಭೂಮಿಗೆ ಪ್ರವಾಸ ಮಾಡಿದವರು 2ನೇ ಭಾರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
• ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಬರಿಸಲಾಗುವುದು ವಸತಿ ಮತ್ತು ಬೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.
ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗಧಿಪಡಿಸಿದ ಗುರಿಯಂತೆ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಆಯ್ಕೆ ಮಾಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂರವಾಣಿ ಸಂಖ್ಯೆ 080- 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂರವಾಣಿ ಸಂಖ್ಯೆ- 080-27623681, ಹೊಸಕೋಟೆ ತಾಲ್ಲೂಕು ದೂರವಾಣಿ ಸಂಖ್ಯೆ- 080-27931528, ನೆಲಮಂಗಲ ತಾಲ್ಲೂಕು ದೂರವಾಣಿ ಸಂಖ್ಯೆ- 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…