2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಲಿಂಕ್ https://sw.kar.nic.in ನಲ್ಲಿ ಆನ್ ಲೈನ್ ಮೂಲಕ ಸೆಪ್ಟೆಂಬರ್ 05ರವರೆಗೆ ವಿಸ್ತರಿಸಲಾಗಿದ್ದು, ಯಾತ್ರಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.”
*ಮಾರ್ಗಸೂಚಿಗಳು:-*
• ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
• ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
• ಯಾತ್ರಾರ್ಥಿಗಳಿಗೆ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು.
• ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
• ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾಭೂಮಿಗೆ ಪ್ರವಾಸ ಮಾಡಿದವರು 2ನೇ ಭಾರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
• ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಬರಿಸಲಾಗುವುದು ವಸತಿ ಮತ್ತು ಬೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.
ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗಧಿಪಡಿಸಿದ ಗುರಿಯಂತೆ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಆಯ್ಕೆ ಮಾಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂರವಾಣಿ ಸಂಖ್ಯೆ 080- 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂರವಾಣಿ ಸಂಖ್ಯೆ- 080-27623681, ಹೊಸಕೋಟೆ ತಾಲ್ಲೂಕು ದೂರವಾಣಿ ಸಂಖ್ಯೆ- 080-27931528, ನೆಲಮಂಗಲ ತಾಲ್ಲೂಕು ದೂರವಾಣಿ ಸಂಖ್ಯೆ- 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…