ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಂದ ಅರ್ಜಿಗಳ ಆಹ್ವಾನ

2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಲಿಂಕ್ https://sw.kar.nic.in ನಲ್ಲಿ ಆನ್ ಲೈನ್ ಮೂಲಕ ಸೆಪ್ಟೆಂಬರ್ 05ರವರೆಗೆ ವಿಸ್ತರಿಸಲಾಗಿದ್ದು, ಯಾತ್ರಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.”

*ಮಾರ್ಗಸೂಚಿಗಳು:-*
• ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
• ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
• ಯಾತ್ರಾರ್ಥಿಗಳಿಗೆ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು.
• ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
• ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾಭೂಮಿಗೆ ಪ್ರವಾಸ ಮಾಡಿದವರು 2ನೇ ಭಾರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
• ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಬರಿಸಲಾಗುವುದು ವಸತಿ ಮತ್ತು ಬೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.

ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗಧಿಪಡಿಸಿದ ಗುರಿಯಂತೆ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಆಯ್ಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂರವಾಣಿ ಸಂಖ್ಯೆ 080- 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂರವಾಣಿ ಸಂಖ್ಯೆ- 080-27623681, ಹೊಸಕೋಟೆ ತಾಲ್ಲೂಕು ದೂರವಾಣಿ ಸಂಖ್ಯೆ- 080-27931528, ನೆಲಮಂಗಲ ತಾಲ್ಲೂಕು ದೂರವಾಣಿ ಸಂಖ್ಯೆ- 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

50 minutes ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

12 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

13 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

14 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

16 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

22 hours ago