ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಂದ ಅರ್ಜಿಗಳ ಆಹ್ವಾನ

2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಲಿಂಕ್ https://sw.kar.nic.in ನಲ್ಲಿ ಆನ್ ಲೈನ್ ಮೂಲಕ ಸೆಪ್ಟೆಂಬರ್ 05ರವರೆಗೆ ವಿಸ್ತರಿಸಲಾಗಿದ್ದು, ಯಾತ್ರಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.”

*ಮಾರ್ಗಸೂಚಿಗಳು:-*
• ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
• ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
• ಯಾತ್ರಾರ್ಥಿಗಳಿಗೆ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು.
• ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
• ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾಭೂಮಿಗೆ ಪ್ರವಾಸ ಮಾಡಿದವರು 2ನೇ ಭಾರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
• ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಬರಿಸಲಾಗುವುದು ವಸತಿ ಮತ್ತು ಬೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.

ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗಧಿಪಡಿಸಿದ ಗುರಿಯಂತೆ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಆಯ್ಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂರವಾಣಿ ಸಂಖ್ಯೆ 080- 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂರವಾಣಿ ಸಂಖ್ಯೆ- 080-27623681, ಹೊಸಕೋಟೆ ತಾಲ್ಲೂಕು ದೂರವಾಣಿ ಸಂಖ್ಯೆ- 080-27931528, ನೆಲಮಂಗಲ ತಾಲ್ಲೂಕು ದೂರವಾಣಿ ಸಂಖ್ಯೆ- 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago