2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಲಿಂಕ್ https://sw.kar.nic.in ನಲ್ಲಿ ಆನ್ ಲೈನ್ ಮೂಲಕ ಸೆಪ್ಟೆಂಬರ್ 05ರವರೆಗೆ ವಿಸ್ತರಿಸಲಾಗಿದ್ದು, ಯಾತ್ರಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.”
*ಮಾರ್ಗಸೂಚಿಗಳು:-*
• ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
• ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
• ಯಾತ್ರಾರ್ಥಿಗಳಿಗೆ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು.
• ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
• ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾಭೂಮಿಗೆ ಪ್ರವಾಸ ಮಾಡಿದವರು 2ನೇ ಭಾರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
• ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಬರಿಸಲಾಗುವುದು ವಸತಿ ಮತ್ತು ಬೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.
ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗಧಿಪಡಿಸಿದ ಗುರಿಯಂತೆ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಆಯ್ಕೆ ಮಾಡಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂರವಾಣಿ ಸಂಖ್ಯೆ 080- 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂರವಾಣಿ ಸಂಖ್ಯೆ- 080-27623681, ಹೊಸಕೋಟೆ ತಾಲ್ಲೂಕು ದೂರವಾಣಿ ಸಂಖ್ಯೆ- 080-27931528, ನೆಲಮಂಗಲ ತಾಲ್ಲೂಕು ದೂರವಾಣಿ ಸಂಖ್ಯೆ- 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…