ದೀಪಾವಳಿ ಸಡಗರ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಜಗಮಗಿಸಿದ “ಪ್ರಕಾಶ ಪರ್ವ” ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ “ಪ್ರಕಾಶ ಪರ್ವ” ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಶಾಲೆ ತುಂಬೆಲ್ಲಾ ಪರಿಸರ ಸ್ನೇಹಿ ಸಾಲು ಸಾಲು ದೀಪ ಬೆಳಗುವ ಮೂಲಕ ಮಕ್ಕಳಿಗೆ ದೀಪಾವಳಿ ಹಬ್ಬದ ಮಹತ್ವ ಸಾರಲಾಯಿತು.

ಶಾಲೆ ಮುಂಭಾಗ, ಆವರಣ, ತರಗತಿಗಳಲ್ಲಿ ಸಾಲು ಸಾಲು ದೀಪಗಳು ಜಗಮಗಿಸಿದವು. ಶಾಲಾ ಆಡಳಿತ ಮಂಡಳಿ, ಮಕ್ಕಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರಕಾಶ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌ ದೀಪ ಹಚ್ಚಿ ಸಂಭ್ರಮಸಿದರು.

ಈ ವೇಳೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಕಾರ್ಯಾರ್ಶಿ ಶ್ರೀನಿವಾಸ್ ಮೂರ್ತಿ ಕೆ‌.ಜಿ ಮಾತನಾಡಿ, ದೀಪಾವಳಿ ಜ್ಞಾನದೀಪ ಹಚ್ಚುವ ಸಂಭ್ರಮದ ಹಬ್ಬ. ಅಜ್ಞಾನ, ಅಂಧಕಾರಗಳನ್ನು ಸುಟ್ಟು ಭಸ್ಮ ಮಾಡುವ ಹಬ್ಬ. ಪ್ರಚಂಡ ತೇಜಸ್ಸನ್ನು ಉದ್ದೀಪಿಸುವ ಹಬ್ಬ. ಪುಣ್ಯಪ್ರದ ದಿನಗಳ ಬೆಳಕನ್ನು ಹೆಚ್ಚಿಸುವ, ಅಹಂಕಾರದ ಕತ್ತಲನ್ನು ಕೊಚ್ಚುವ, ದೀಪದ ಹಬ್ಬ. ದೀಪಾವಳಿ ಬಂದರೆ ಸಾಕು ಬೆಳಕಿನ ಬಾಗಿಲು ತೆರೆಯುತ್ತದೆ. ದುಃಖ ದುಗುಡಗಳ ಕತ್ತಲು ಮರೆಯುತ್ತದೆ. ದೇವಭಾವದತ್ತ ಸರಿಯುವ, ಸಜ್ಜನ ಸಂಗದಲ್ಲಿ ಬೆರೆಯುವ, ಹೊಸ ಸಡಗರ-ಸಂತಸದ ಬದುಕನ್ನು ತೆರೆಯುವ, ಸಾಲು ಸಾಲು ದೀಪ ಬೆಳಗುವ ಹಬ್ಬವೇ ದೀಪಾವಳಿ. ಈ‌ ಹಿನ್ನೆಲೆ ನಮ್ಮ ಶಾಲೆಯಲ್ಲಿ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ ಎಂದರು.

ದೀಪಾವಳಿ ಕತ್ತಲಿನಿಂದ ದೂರಸರಿಸುವ ಬದಲು ಜೀವನವನ್ನೇ ಕತ್ತಲು ಮಾಡುವ ಪಟಾಕಿಯಿಂದ ದೂರ ಇರಬೇಕು. ಈಗಾಗಲೇ ಪರಿಸರ ಮಾಲಿನವಾಗಿದೆ. ಮತ್ತಷ್ಟು ಹಾಳು ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಪಟಾಕಿ ಸುಡುವುದರಿಂದ ಅದರಲ್ಲಿನ ಹಾನಿಕಾರಕ ವಿಷ ವಸ್ತುಗಳು ಪರಿಸರಕ್ಕೆ ಸೇರಲಿವೆ. ಇದರಿಂದ ಚರ್ಮವ್ಯಾಧಿ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ನಂತಹ ಹಲವು ಕಾಯಿಲೆಗಳನ್ನು ದುಡ್ಡು ಕೊಟ್ಟು ನಾವೇ ಪಡೆದುಕೊಳ್ಳುವಂತಾಗಲಿದೆ. ವಿಷಕಾರಕ ವಸ್ತು ನೇರವಾಗಿ ಶ್ವಾಸಕೋಶಕ್ಕೆ ಸೇರುವುದರಿಂದ ತೀವ್ರ ಉಸಿರಾಟ ತೊಂದರೆಯಾಗಲಿದೆ ಎಂದು ಹೇಳಿದರು.

ಪಟಾಕಿ ಸುಡುವುದರಿಂದ ನಮಗೆ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ ಕೂಡ ಕಂಟಕವಾಗುತ್ತದೆ. ಹಾಗಾಗಿ ಮಕ್ಕಳು ಹಠ ಮಾಡದೆ ಪಟಾಕಿ ಸುಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೋಷಕರು ಮಾತನಾಡಿ, ಈ ಶಾಲೆಯಲ್ಲಿ‌ ಪಠ್ಯದ‌ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಿ ಮಕ್ಕಳ ಸರ್ವತೋಮುಖ‌ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂಬ ಭರವಸೆ ನಮ್ಮಲ್ಲಿದೆ. ಇದಕ್ಕೆ ಶ್ರಮಿಸುತ್ತಿರುವ ಲಿಟ್ಲ್ ಮಾಸ್ಟರ್ ಶಾಲೆಗೆ ಧನ್ಯವಾದ ಎಂದು ಹೇಳಿದರು.

ಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ದೀಪಾವಳಿ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ನಾವು ಭಾಗವಹಿಸಿ ಸಂಭ್ರಮಿಸಿದ್ದೇವೆ. ನಮಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು..

ನಂತರ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಈ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಮಕ್ಕಳ ಜೊತೆಗೆ ಪೋಷಕರು ಪಾಲ್ಗೊಂಡು ವಿವಿಧ ನೃತ್ಯಗಳನ್ನು ಮಾಡಿ ಸಂಭ್ರಮಿಸಿದರು.

ಈ ವೇಳೆ ಅಧ್ಯಕ್ಷೆ ಉಷಾ ಶ್ರೀನಿವಾಸ್, ಮುಖ್ಯಶಿಕ್ಷಕಿ ಶೋಭಾವತಿ ಆರ್, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

5 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

18 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

19 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

20 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

21 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago