ದೀಪಾವಳಿ ಸಡಗರ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಜಗಮಗಿಸಿದ “ಪ್ರಕಾಶ ಪರ್ವ” ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ “ಪ್ರಕಾಶ ಪರ್ವ” ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಶಾಲೆ ತುಂಬೆಲ್ಲಾ ಪರಿಸರ ಸ್ನೇಹಿ ಸಾಲು ಸಾಲು ದೀಪ ಬೆಳಗುವ ಮೂಲಕ ಮಕ್ಕಳಿಗೆ ದೀಪಾವಳಿ ಹಬ್ಬದ ಮಹತ್ವ ಸಾರಲಾಯಿತು.

ಶಾಲೆ ಮುಂಭಾಗ, ಆವರಣ, ತರಗತಿಗಳಲ್ಲಿ ಸಾಲು ಸಾಲು ದೀಪಗಳು ಜಗಮಗಿಸಿದವು. ಶಾಲಾ ಆಡಳಿತ ಮಂಡಳಿ, ಮಕ್ಕಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರಕಾಶ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌ ದೀಪ ಹಚ್ಚಿ ಸಂಭ್ರಮಸಿದರು.

ಈ ವೇಳೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಕಾರ್ಯಾರ್ಶಿ ಶ್ರೀನಿವಾಸ್ ಮೂರ್ತಿ ಕೆ‌.ಜಿ ಮಾತನಾಡಿ, ದೀಪಾವಳಿ ಜ್ಞಾನದೀಪ ಹಚ್ಚುವ ಸಂಭ್ರಮದ ಹಬ್ಬ. ಅಜ್ಞಾನ, ಅಂಧಕಾರಗಳನ್ನು ಸುಟ್ಟು ಭಸ್ಮ ಮಾಡುವ ಹಬ್ಬ. ಪ್ರಚಂಡ ತೇಜಸ್ಸನ್ನು ಉದ್ದೀಪಿಸುವ ಹಬ್ಬ. ಪುಣ್ಯಪ್ರದ ದಿನಗಳ ಬೆಳಕನ್ನು ಹೆಚ್ಚಿಸುವ, ಅಹಂಕಾರದ ಕತ್ತಲನ್ನು ಕೊಚ್ಚುವ, ದೀಪದ ಹಬ್ಬ. ದೀಪಾವಳಿ ಬಂದರೆ ಸಾಕು ಬೆಳಕಿನ ಬಾಗಿಲು ತೆರೆಯುತ್ತದೆ. ದುಃಖ ದುಗುಡಗಳ ಕತ್ತಲು ಮರೆಯುತ್ತದೆ. ದೇವಭಾವದತ್ತ ಸರಿಯುವ, ಸಜ್ಜನ ಸಂಗದಲ್ಲಿ ಬೆರೆಯುವ, ಹೊಸ ಸಡಗರ-ಸಂತಸದ ಬದುಕನ್ನು ತೆರೆಯುವ, ಸಾಲು ಸಾಲು ದೀಪ ಬೆಳಗುವ ಹಬ್ಬವೇ ದೀಪಾವಳಿ. ಈ‌ ಹಿನ್ನೆಲೆ ನಮ್ಮ ಶಾಲೆಯಲ್ಲಿ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ ಎಂದರು.

ದೀಪಾವಳಿ ಕತ್ತಲಿನಿಂದ ದೂರಸರಿಸುವ ಬದಲು ಜೀವನವನ್ನೇ ಕತ್ತಲು ಮಾಡುವ ಪಟಾಕಿಯಿಂದ ದೂರ ಇರಬೇಕು. ಈಗಾಗಲೇ ಪರಿಸರ ಮಾಲಿನವಾಗಿದೆ. ಮತ್ತಷ್ಟು ಹಾಳು ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಪಟಾಕಿ ಸುಡುವುದರಿಂದ ಅದರಲ್ಲಿನ ಹಾನಿಕಾರಕ ವಿಷ ವಸ್ತುಗಳು ಪರಿಸರಕ್ಕೆ ಸೇರಲಿವೆ. ಇದರಿಂದ ಚರ್ಮವ್ಯಾಧಿ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ನಂತಹ ಹಲವು ಕಾಯಿಲೆಗಳನ್ನು ದುಡ್ಡು ಕೊಟ್ಟು ನಾವೇ ಪಡೆದುಕೊಳ್ಳುವಂತಾಗಲಿದೆ. ವಿಷಕಾರಕ ವಸ್ತು ನೇರವಾಗಿ ಶ್ವಾಸಕೋಶಕ್ಕೆ ಸೇರುವುದರಿಂದ ತೀವ್ರ ಉಸಿರಾಟ ತೊಂದರೆಯಾಗಲಿದೆ ಎಂದು ಹೇಳಿದರು.

ಪಟಾಕಿ ಸುಡುವುದರಿಂದ ನಮಗೆ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ ಕೂಡ ಕಂಟಕವಾಗುತ್ತದೆ. ಹಾಗಾಗಿ ಮಕ್ಕಳು ಹಠ ಮಾಡದೆ ಪಟಾಕಿ ಸುಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೋಷಕರು ಮಾತನಾಡಿ, ಈ ಶಾಲೆಯಲ್ಲಿ‌ ಪಠ್ಯದ‌ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಿ ಮಕ್ಕಳ ಸರ್ವತೋಮುಖ‌ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂಬ ಭರವಸೆ ನಮ್ಮಲ್ಲಿದೆ. ಇದಕ್ಕೆ ಶ್ರಮಿಸುತ್ತಿರುವ ಲಿಟ್ಲ್ ಮಾಸ್ಟರ್ ಶಾಲೆಗೆ ಧನ್ಯವಾದ ಎಂದು ಹೇಳಿದರು.

ಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ದೀಪಾವಳಿ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ನಾವು ಭಾಗವಹಿಸಿ ಸಂಭ್ರಮಿಸಿದ್ದೇವೆ. ನಮಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು..

ನಂತರ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಈ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಮಕ್ಕಳ ಜೊತೆಗೆ ಪೋಷಕರು ಪಾಲ್ಗೊಂಡು ವಿವಿಧ ನೃತ್ಯಗಳನ್ನು ಮಾಡಿ ಸಂಭ್ರಮಿಸಿದರು.

ಈ ವೇಳೆ ಅಧ್ಯಕ್ಷೆ ಉಷಾ ಶ್ರೀನಿವಾಸ್, ಮುಖ್ಯಶಿಕ್ಷಕಿ ಶೋಭಾವತಿ ಆರ್, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

59 minutes ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

3 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

7 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago