ದೀಪಾವಳಿ ಸಡಗರ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಜಗಮಗಿಸಿದ “ಪ್ರಕಾಶ ಪರ್ವ” ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ “ಪ್ರಕಾಶ ಪರ್ವ” ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಶಾಲೆ ತುಂಬೆಲ್ಲಾ ಪರಿಸರ ಸ್ನೇಹಿ ಸಾಲು ಸಾಲು ದೀಪ ಬೆಳಗುವ ಮೂಲಕ ಮಕ್ಕಳಿಗೆ ದೀಪಾವಳಿ ಹಬ್ಬದ ಮಹತ್ವ ಸಾರಲಾಯಿತು.

ಶಾಲೆ ಮುಂಭಾಗ, ಆವರಣ, ತರಗತಿಗಳಲ್ಲಿ ಸಾಲು ಸಾಲು ದೀಪಗಳು ಜಗಮಗಿಸಿದವು. ಶಾಲಾ ಆಡಳಿತ ಮಂಡಳಿ, ಮಕ್ಕಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರಕಾಶ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌ ದೀಪ ಹಚ್ಚಿ ಸಂಭ್ರಮಸಿದರು.

ಈ ವೇಳೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಕಾರ್ಯಾರ್ಶಿ ಶ್ರೀನಿವಾಸ್ ಮೂರ್ತಿ ಕೆ‌.ಜಿ ಮಾತನಾಡಿ, ದೀಪಾವಳಿ ಜ್ಞಾನದೀಪ ಹಚ್ಚುವ ಸಂಭ್ರಮದ ಹಬ್ಬ. ಅಜ್ಞಾನ, ಅಂಧಕಾರಗಳನ್ನು ಸುಟ್ಟು ಭಸ್ಮ ಮಾಡುವ ಹಬ್ಬ. ಪ್ರಚಂಡ ತೇಜಸ್ಸನ್ನು ಉದ್ದೀಪಿಸುವ ಹಬ್ಬ. ಪುಣ್ಯಪ್ರದ ದಿನಗಳ ಬೆಳಕನ್ನು ಹೆಚ್ಚಿಸುವ, ಅಹಂಕಾರದ ಕತ್ತಲನ್ನು ಕೊಚ್ಚುವ, ದೀಪದ ಹಬ್ಬ. ದೀಪಾವಳಿ ಬಂದರೆ ಸಾಕು ಬೆಳಕಿನ ಬಾಗಿಲು ತೆರೆಯುತ್ತದೆ. ದುಃಖ ದುಗುಡಗಳ ಕತ್ತಲು ಮರೆಯುತ್ತದೆ. ದೇವಭಾವದತ್ತ ಸರಿಯುವ, ಸಜ್ಜನ ಸಂಗದಲ್ಲಿ ಬೆರೆಯುವ, ಹೊಸ ಸಡಗರ-ಸಂತಸದ ಬದುಕನ್ನು ತೆರೆಯುವ, ಸಾಲು ಸಾಲು ದೀಪ ಬೆಳಗುವ ಹಬ್ಬವೇ ದೀಪಾವಳಿ. ಈ‌ ಹಿನ್ನೆಲೆ ನಮ್ಮ ಶಾಲೆಯಲ್ಲಿ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ ಎಂದರು.

ದೀಪಾವಳಿ ಕತ್ತಲಿನಿಂದ ದೂರಸರಿಸುವ ಬದಲು ಜೀವನವನ್ನೇ ಕತ್ತಲು ಮಾಡುವ ಪಟಾಕಿಯಿಂದ ದೂರ ಇರಬೇಕು. ಈಗಾಗಲೇ ಪರಿಸರ ಮಾಲಿನವಾಗಿದೆ. ಮತ್ತಷ್ಟು ಹಾಳು ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಪಟಾಕಿ ಸುಡುವುದರಿಂದ ಅದರಲ್ಲಿನ ಹಾನಿಕಾರಕ ವಿಷ ವಸ್ತುಗಳು ಪರಿಸರಕ್ಕೆ ಸೇರಲಿವೆ. ಇದರಿಂದ ಚರ್ಮವ್ಯಾಧಿ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ನಂತಹ ಹಲವು ಕಾಯಿಲೆಗಳನ್ನು ದುಡ್ಡು ಕೊಟ್ಟು ನಾವೇ ಪಡೆದುಕೊಳ್ಳುವಂತಾಗಲಿದೆ. ವಿಷಕಾರಕ ವಸ್ತು ನೇರವಾಗಿ ಶ್ವಾಸಕೋಶಕ್ಕೆ ಸೇರುವುದರಿಂದ ತೀವ್ರ ಉಸಿರಾಟ ತೊಂದರೆಯಾಗಲಿದೆ ಎಂದು ಹೇಳಿದರು.

ಪಟಾಕಿ ಸುಡುವುದರಿಂದ ನಮಗೆ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ ಕೂಡ ಕಂಟಕವಾಗುತ್ತದೆ. ಹಾಗಾಗಿ ಮಕ್ಕಳು ಹಠ ಮಾಡದೆ ಪಟಾಕಿ ಸುಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೋಷಕರು ಮಾತನಾಡಿ, ಈ ಶಾಲೆಯಲ್ಲಿ‌ ಪಠ್ಯದ‌ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಿ ಮಕ್ಕಳ ಸರ್ವತೋಮುಖ‌ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂಬ ಭರವಸೆ ನಮ್ಮಲ್ಲಿದೆ. ಇದಕ್ಕೆ ಶ್ರಮಿಸುತ್ತಿರುವ ಲಿಟ್ಲ್ ಮಾಸ್ಟರ್ ಶಾಲೆಗೆ ಧನ್ಯವಾದ ಎಂದು ಹೇಳಿದರು.

ಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ದೀಪಾವಳಿ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ನಾವು ಭಾಗವಹಿಸಿ ಸಂಭ್ರಮಿಸಿದ್ದೇವೆ. ನಮಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು..

ನಂತರ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಈ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಮಕ್ಕಳ ಜೊತೆಗೆ ಪೋಷಕರು ಪಾಲ್ಗೊಂಡು ವಿವಿಧ ನೃತ್ಯಗಳನ್ನು ಮಾಡಿ ಸಂಭ್ರಮಿಸಿದರು.

ಈ ವೇಳೆ ಅಧ್ಯಕ್ಷೆ ಉಷಾ ಶ್ರೀನಿವಾಸ್, ಮುಖ್ಯಶಿಕ್ಷಕಿ ಶೋಭಾವತಿ ಆರ್, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

46 minutes ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

3 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

15 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

15 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

16 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

21 hours ago