ದೀಪಾವಳಿ ಸಡಗರ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಜಗಮಗಿಸಿದ “ಪ್ರಕಾಶ ಪರ್ವ” ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ “ಪ್ರಕಾಶ ಪರ್ವ” ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಶಾಲೆ ತುಂಬೆಲ್ಲಾ ಪರಿಸರ ಸ್ನೇಹಿ ಸಾಲು ಸಾಲು ದೀಪ ಬೆಳಗುವ ಮೂಲಕ ಮಕ್ಕಳಿಗೆ ದೀಪಾವಳಿ ಹಬ್ಬದ ಮಹತ್ವ ಸಾರಲಾಯಿತು.

ಶಾಲೆ ಮುಂಭಾಗ, ಆವರಣ, ತರಗತಿಗಳಲ್ಲಿ ಸಾಲು ಸಾಲು ದೀಪಗಳು ಜಗಮಗಿಸಿದವು. ಶಾಲಾ ಆಡಳಿತ ಮಂಡಳಿ, ಮಕ್ಕಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರಕಾಶ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌ ದೀಪ ಹಚ್ಚಿ ಸಂಭ್ರಮಸಿದರು.

ಈ ವೇಳೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಕಾರ್ಯಾರ್ಶಿ ಶ್ರೀನಿವಾಸ್ ಮೂರ್ತಿ ಕೆ‌.ಜಿ ಮಾತನಾಡಿ, ದೀಪಾವಳಿ ಜ್ಞಾನದೀಪ ಹಚ್ಚುವ ಸಂಭ್ರಮದ ಹಬ್ಬ. ಅಜ್ಞಾನ, ಅಂಧಕಾರಗಳನ್ನು ಸುಟ್ಟು ಭಸ್ಮ ಮಾಡುವ ಹಬ್ಬ. ಪ್ರಚಂಡ ತೇಜಸ್ಸನ್ನು ಉದ್ದೀಪಿಸುವ ಹಬ್ಬ. ಪುಣ್ಯಪ್ರದ ದಿನಗಳ ಬೆಳಕನ್ನು ಹೆಚ್ಚಿಸುವ, ಅಹಂಕಾರದ ಕತ್ತಲನ್ನು ಕೊಚ್ಚುವ, ದೀಪದ ಹಬ್ಬ. ದೀಪಾವಳಿ ಬಂದರೆ ಸಾಕು ಬೆಳಕಿನ ಬಾಗಿಲು ತೆರೆಯುತ್ತದೆ. ದುಃಖ ದುಗುಡಗಳ ಕತ್ತಲು ಮರೆಯುತ್ತದೆ. ದೇವಭಾವದತ್ತ ಸರಿಯುವ, ಸಜ್ಜನ ಸಂಗದಲ್ಲಿ ಬೆರೆಯುವ, ಹೊಸ ಸಡಗರ-ಸಂತಸದ ಬದುಕನ್ನು ತೆರೆಯುವ, ಸಾಲು ಸಾಲು ದೀಪ ಬೆಳಗುವ ಹಬ್ಬವೇ ದೀಪಾವಳಿ. ಈ‌ ಹಿನ್ನೆಲೆ ನಮ್ಮ ಶಾಲೆಯಲ್ಲಿ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ ಎಂದರು.

ದೀಪಾವಳಿ ಕತ್ತಲಿನಿಂದ ದೂರಸರಿಸುವ ಬದಲು ಜೀವನವನ್ನೇ ಕತ್ತಲು ಮಾಡುವ ಪಟಾಕಿಯಿಂದ ದೂರ ಇರಬೇಕು. ಈಗಾಗಲೇ ಪರಿಸರ ಮಾಲಿನವಾಗಿದೆ. ಮತ್ತಷ್ಟು ಹಾಳು ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಪಟಾಕಿ ಸುಡುವುದರಿಂದ ಅದರಲ್ಲಿನ ಹಾನಿಕಾರಕ ವಿಷ ವಸ್ತುಗಳು ಪರಿಸರಕ್ಕೆ ಸೇರಲಿವೆ. ಇದರಿಂದ ಚರ್ಮವ್ಯಾಧಿ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ನಂತಹ ಹಲವು ಕಾಯಿಲೆಗಳನ್ನು ದುಡ್ಡು ಕೊಟ್ಟು ನಾವೇ ಪಡೆದುಕೊಳ್ಳುವಂತಾಗಲಿದೆ. ವಿಷಕಾರಕ ವಸ್ತು ನೇರವಾಗಿ ಶ್ವಾಸಕೋಶಕ್ಕೆ ಸೇರುವುದರಿಂದ ತೀವ್ರ ಉಸಿರಾಟ ತೊಂದರೆಯಾಗಲಿದೆ ಎಂದು ಹೇಳಿದರು.

ಪಟಾಕಿ ಸುಡುವುದರಿಂದ ನಮಗೆ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ ಕೂಡ ಕಂಟಕವಾಗುತ್ತದೆ. ಹಾಗಾಗಿ ಮಕ್ಕಳು ಹಠ ಮಾಡದೆ ಪಟಾಕಿ ಸುಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೋಷಕರು ಮಾತನಾಡಿ, ಈ ಶಾಲೆಯಲ್ಲಿ‌ ಪಠ್ಯದ‌ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಿ ಮಕ್ಕಳ ಸರ್ವತೋಮುಖ‌ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂಬ ಭರವಸೆ ನಮ್ಮಲ್ಲಿದೆ. ಇದಕ್ಕೆ ಶ್ರಮಿಸುತ್ತಿರುವ ಲಿಟ್ಲ್ ಮಾಸ್ಟರ್ ಶಾಲೆಗೆ ಧನ್ಯವಾದ ಎಂದು ಹೇಳಿದರು.

ಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ದೀಪಾವಳಿ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ನಾವು ಭಾಗವಹಿಸಿ ಸಂಭ್ರಮಿಸಿದ್ದೇವೆ. ನಮಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು..

ನಂತರ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಈ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಮಕ್ಕಳ ಜೊತೆಗೆ ಪೋಷಕರು ಪಾಲ್ಗೊಂಡು ವಿವಿಧ ನೃತ್ಯಗಳನ್ನು ಮಾಡಿ ಸಂಭ್ರಮಿಸಿದರು.

ಈ ವೇಳೆ ಅಧ್ಯಕ್ಷೆ ಉಷಾ ಶ್ರೀನಿವಾಸ್, ಮುಖ್ಯಶಿಕ್ಷಕಿ ಶೋಭಾವತಿ ಆರ್, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

4 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

15 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

20 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

22 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago