ದೀಪಾವಳಿ ಸಡಗರ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಜಗಮಗಿಸಿದ “ಪ್ರಕಾಶ ಪರ್ವ” ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ “ಪ್ರಕಾಶ ಪರ್ವ” ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಶಾಲೆ ತುಂಬೆಲ್ಲಾ ಪರಿಸರ ಸ್ನೇಹಿ ಸಾಲು ಸಾಲು ದೀಪ ಬೆಳಗುವ ಮೂಲಕ ಮಕ್ಕಳಿಗೆ ದೀಪಾವಳಿ ಹಬ್ಬದ ಮಹತ್ವ ಸಾರಲಾಯಿತು.

ಶಾಲೆ ಮುಂಭಾಗ, ಆವರಣ, ತರಗತಿಗಳಲ್ಲಿ ಸಾಲು ಸಾಲು ದೀಪಗಳು ಜಗಮಗಿಸಿದವು. ಶಾಲಾ ಆಡಳಿತ ಮಂಡಳಿ, ಮಕ್ಕಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರಕಾಶ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌ ದೀಪ ಹಚ್ಚಿ ಸಂಭ್ರಮಸಿದರು.

ಈ ವೇಳೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಕಾರ್ಯಾರ್ಶಿ ಶ್ರೀನಿವಾಸ್ ಮೂರ್ತಿ ಕೆ‌.ಜಿ ಮಾತನಾಡಿ, ದೀಪಾವಳಿ ಜ್ಞಾನದೀಪ ಹಚ್ಚುವ ಸಂಭ್ರಮದ ಹಬ್ಬ. ಅಜ್ಞಾನ, ಅಂಧಕಾರಗಳನ್ನು ಸುಟ್ಟು ಭಸ್ಮ ಮಾಡುವ ಹಬ್ಬ. ಪ್ರಚಂಡ ತೇಜಸ್ಸನ್ನು ಉದ್ದೀಪಿಸುವ ಹಬ್ಬ. ಪುಣ್ಯಪ್ರದ ದಿನಗಳ ಬೆಳಕನ್ನು ಹೆಚ್ಚಿಸುವ, ಅಹಂಕಾರದ ಕತ್ತಲನ್ನು ಕೊಚ್ಚುವ, ದೀಪದ ಹಬ್ಬ. ದೀಪಾವಳಿ ಬಂದರೆ ಸಾಕು ಬೆಳಕಿನ ಬಾಗಿಲು ತೆರೆಯುತ್ತದೆ. ದುಃಖ ದುಗುಡಗಳ ಕತ್ತಲು ಮರೆಯುತ್ತದೆ. ದೇವಭಾವದತ್ತ ಸರಿಯುವ, ಸಜ್ಜನ ಸಂಗದಲ್ಲಿ ಬೆರೆಯುವ, ಹೊಸ ಸಡಗರ-ಸಂತಸದ ಬದುಕನ್ನು ತೆರೆಯುವ, ಸಾಲು ಸಾಲು ದೀಪ ಬೆಳಗುವ ಹಬ್ಬವೇ ದೀಪಾವಳಿ. ಈ‌ ಹಿನ್ನೆಲೆ ನಮ್ಮ ಶಾಲೆಯಲ್ಲಿ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ ಎಂದರು.

ದೀಪಾವಳಿ ಕತ್ತಲಿನಿಂದ ದೂರಸರಿಸುವ ಬದಲು ಜೀವನವನ್ನೇ ಕತ್ತಲು ಮಾಡುವ ಪಟಾಕಿಯಿಂದ ದೂರ ಇರಬೇಕು. ಈಗಾಗಲೇ ಪರಿಸರ ಮಾಲಿನವಾಗಿದೆ. ಮತ್ತಷ್ಟು ಹಾಳು ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಪಟಾಕಿ ಸುಡುವುದರಿಂದ ಅದರಲ್ಲಿನ ಹಾನಿಕಾರಕ ವಿಷ ವಸ್ತುಗಳು ಪರಿಸರಕ್ಕೆ ಸೇರಲಿವೆ. ಇದರಿಂದ ಚರ್ಮವ್ಯಾಧಿ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ನಂತಹ ಹಲವು ಕಾಯಿಲೆಗಳನ್ನು ದುಡ್ಡು ಕೊಟ್ಟು ನಾವೇ ಪಡೆದುಕೊಳ್ಳುವಂತಾಗಲಿದೆ. ವಿಷಕಾರಕ ವಸ್ತು ನೇರವಾಗಿ ಶ್ವಾಸಕೋಶಕ್ಕೆ ಸೇರುವುದರಿಂದ ತೀವ್ರ ಉಸಿರಾಟ ತೊಂದರೆಯಾಗಲಿದೆ ಎಂದು ಹೇಳಿದರು.

ಪಟಾಕಿ ಸುಡುವುದರಿಂದ ನಮಗೆ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ ಕೂಡ ಕಂಟಕವಾಗುತ್ತದೆ. ಹಾಗಾಗಿ ಮಕ್ಕಳು ಹಠ ಮಾಡದೆ ಪಟಾಕಿ ಸುಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೋಷಕರು ಮಾತನಾಡಿ, ಈ ಶಾಲೆಯಲ್ಲಿ‌ ಪಠ್ಯದ‌ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಿ ಮಕ್ಕಳ ಸರ್ವತೋಮುಖ‌ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂಬ ಭರವಸೆ ನಮ್ಮಲ್ಲಿದೆ. ಇದಕ್ಕೆ ಶ್ರಮಿಸುತ್ತಿರುವ ಲಿಟ್ಲ್ ಮಾಸ್ಟರ್ ಶಾಲೆಗೆ ಧನ್ಯವಾದ ಎಂದು ಹೇಳಿದರು.

ಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ದೀಪಾವಳಿ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ನಾವು ಭಾಗವಹಿಸಿ ಸಂಭ್ರಮಿಸಿದ್ದೇವೆ. ನಮಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು..

ನಂತರ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಈ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಮಕ್ಕಳ ಜೊತೆಗೆ ಪೋಷಕರು ಪಾಲ್ಗೊಂಡು ವಿವಿಧ ನೃತ್ಯಗಳನ್ನು ಮಾಡಿ ಸಂಭ್ರಮಿಸಿದರು.

ಈ ವೇಳೆ ಅಧ್ಯಕ್ಷೆ ಉಷಾ ಶ್ರೀನಿವಾಸ್, ಮುಖ್ಯಶಿಕ್ಷಕಿ ಶೋಭಾವತಿ ಆರ್, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

3 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago