ದೀಪಾವಳಿ ಸಡಗರ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಜಗಮಗಿಸಿದ “ಪ್ರಕಾಶ ಪರ್ವ” ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿರುವ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ “ಪ್ರಕಾಶ ಪರ್ವ” ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಶಾಲೆ ತುಂಬೆಲ್ಲಾ ಪರಿಸರ ಸ್ನೇಹಿ ಸಾಲು ಸಾಲು ದೀಪ ಬೆಳಗುವ ಮೂಲಕ ಮಕ್ಕಳಿಗೆ ದೀಪಾವಳಿ ಹಬ್ಬದ ಮಹತ್ವ ಸಾರಲಾಯಿತು.

ಶಾಲೆ ಮುಂಭಾಗ, ಆವರಣ, ತರಗತಿಗಳಲ್ಲಿ ಸಾಲು ಸಾಲು ದೀಪಗಳು ಜಗಮಗಿಸಿದವು. ಶಾಲಾ ಆಡಳಿತ ಮಂಡಳಿ, ಮಕ್ಕಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರಕಾಶ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು‌ ದೀಪ ಹಚ್ಚಿ ಸಂಭ್ರಮಸಿದರು.

ಈ ವೇಳೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಕಾರ್ಯಾರ್ಶಿ ಶ್ರೀನಿವಾಸ್ ಮೂರ್ತಿ ಕೆ‌.ಜಿ ಮಾತನಾಡಿ, ದೀಪಾವಳಿ ಜ್ಞಾನದೀಪ ಹಚ್ಚುವ ಸಂಭ್ರಮದ ಹಬ್ಬ. ಅಜ್ಞಾನ, ಅಂಧಕಾರಗಳನ್ನು ಸುಟ್ಟು ಭಸ್ಮ ಮಾಡುವ ಹಬ್ಬ. ಪ್ರಚಂಡ ತೇಜಸ್ಸನ್ನು ಉದ್ದೀಪಿಸುವ ಹಬ್ಬ. ಪುಣ್ಯಪ್ರದ ದಿನಗಳ ಬೆಳಕನ್ನು ಹೆಚ್ಚಿಸುವ, ಅಹಂಕಾರದ ಕತ್ತಲನ್ನು ಕೊಚ್ಚುವ, ದೀಪದ ಹಬ್ಬ. ದೀಪಾವಳಿ ಬಂದರೆ ಸಾಕು ಬೆಳಕಿನ ಬಾಗಿಲು ತೆರೆಯುತ್ತದೆ. ದುಃಖ ದುಗುಡಗಳ ಕತ್ತಲು ಮರೆಯುತ್ತದೆ. ದೇವಭಾವದತ್ತ ಸರಿಯುವ, ಸಜ್ಜನ ಸಂಗದಲ್ಲಿ ಬೆರೆಯುವ, ಹೊಸ ಸಡಗರ-ಸಂತಸದ ಬದುಕನ್ನು ತೆರೆಯುವ, ಸಾಲು ಸಾಲು ದೀಪ ಬೆಳಗುವ ಹಬ್ಬವೇ ದೀಪಾವಳಿ. ಈ‌ ಹಿನ್ನೆಲೆ ನಮ್ಮ ಶಾಲೆಯಲ್ಲಿ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿದ್ದೇವೆ ಎಂದರು.

ದೀಪಾವಳಿ ಕತ್ತಲಿನಿಂದ ದೂರಸರಿಸುವ ಬದಲು ಜೀವನವನ್ನೇ ಕತ್ತಲು ಮಾಡುವ ಪಟಾಕಿಯಿಂದ ದೂರ ಇರಬೇಕು. ಈಗಾಗಲೇ ಪರಿಸರ ಮಾಲಿನವಾಗಿದೆ. ಮತ್ತಷ್ಟು ಹಾಳು ಮಾಡುವುದು ಬೇಡ ಎಂದು ಸಲಹೆ ನೀಡಿದರು.

ಪಟಾಕಿ ಸುಡುವುದರಿಂದ ಅದರಲ್ಲಿನ ಹಾನಿಕಾರಕ ವಿಷ ವಸ್ತುಗಳು ಪರಿಸರಕ್ಕೆ ಸೇರಲಿವೆ. ಇದರಿಂದ ಚರ್ಮವ್ಯಾಧಿ, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ನಂತಹ ಹಲವು ಕಾಯಿಲೆಗಳನ್ನು ದುಡ್ಡು ಕೊಟ್ಟು ನಾವೇ ಪಡೆದುಕೊಳ್ಳುವಂತಾಗಲಿದೆ. ವಿಷಕಾರಕ ವಸ್ತು ನೇರವಾಗಿ ಶ್ವಾಸಕೋಶಕ್ಕೆ ಸೇರುವುದರಿಂದ ತೀವ್ರ ಉಸಿರಾಟ ತೊಂದರೆಯಾಗಲಿದೆ ಎಂದು ಹೇಳಿದರು.

ಪಟಾಕಿ ಸುಡುವುದರಿಂದ ನಮಗೆ ಜೊತೆಗೆ ಪ್ರಾಣಿ, ಪಕ್ಷಿಗಳಿಗೆ ಕೂಡ ಕಂಟಕವಾಗುತ್ತದೆ. ಹಾಗಾಗಿ ಮಕ್ಕಳು ಹಠ ಮಾಡದೆ ಪಟಾಕಿ ಸುಡುವುದನ್ನು ಬಿಡಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೋಷಕರು ಮಾತನಾಡಿ, ಈ ಶಾಲೆಯಲ್ಲಿ‌ ಪಠ್ಯದ‌ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಿ ಮಕ್ಕಳ ಸರ್ವತೋಮುಖ‌ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂಬ ಭರವಸೆ ನಮ್ಮಲ್ಲಿದೆ. ಇದಕ್ಕೆ ಶ್ರಮಿಸುತ್ತಿರುವ ಲಿಟ್ಲ್ ಮಾಸ್ಟರ್ ಶಾಲೆಗೆ ಧನ್ಯವಾದ ಎಂದು ಹೇಳಿದರು.

ಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ ಪರ್ವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳಿಗೆ ದೀಪಾವಳಿ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ನಾವು ಭಾಗವಹಿಸಿ ಸಂಭ್ರಮಿಸಿದ್ದೇವೆ. ನಮಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ತಿಳಿಸಿದರು..

ನಂತರ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಈ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಮಕ್ಕಳ ಜೊತೆಗೆ ಪೋಷಕರು ಪಾಲ್ಗೊಂಡು ವಿವಿಧ ನೃತ್ಯಗಳನ್ನು ಮಾಡಿ ಸಂಭ್ರಮಿಸಿದರು.

ಈ ವೇಳೆ ಅಧ್ಯಕ್ಷೆ ಉಷಾ ಶ್ರೀನಿವಾಸ್, ಮುಖ್ಯಶಿಕ್ಷಕಿ ಶೋಭಾವತಿ ಆರ್, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

6 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago