ದೀಪಾವಳಿ ಹಬ್ಬದಂದು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಮಾತ್ರ ಅವಕಾಶ

ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸಿ, ವಾಯುಮಾಲಿನ್ಯ ತಡೆಯಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮಾಡುತ್ತಿದ್ದಲ್ಲಿ, ಕೂಡಲೇ ಅದನ್ನು ಪರಿಶೀಲಿಸುವ ಜತೆಗೆ ಅಲ್ಲಿ ಹಸಿರು ಪಟಾಕಿಯಲ್ಲದೆ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು.

ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಳಿಗೆಗಳಲ್ಲಿ ಅನಧಿಕೃತವಾಗಿ ಪಟಾಕಿ ಸಂಗ್ರಹಣೆ ಮಾಡಿಕೊಂಡರೆ, ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಸುರಕ್ಷತಾ ಕ್ರಮಗಳನ್ನು ಪೊಲೀಸರು ಪರಿಶೀಲನೆ ನಡೆಸಬೇಕು ಎಂದರು.

ಹಬ್ಬದ ಸಂದರ್ಭದಲ್ಲಿ ರಾತ್ರಿ 08 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಿದೆ. ಹಸಿರು ಪಟಾಕಿಗಳನ್ನು ಬಿಟ್ಟು ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಡಿವೈಎಸ್ಪಿ ರವಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

4 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

4 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

5 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

14 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

16 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

17 hours ago