ದೀಪಾವಳಿ ಹಬ್ಬದಂದು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಮಾತ್ರ ಅವಕಾಶ

ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸಿ, ವಾಯುಮಾಲಿನ್ಯ ತಡೆಯಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮಾಡುತ್ತಿದ್ದಲ್ಲಿ, ಕೂಡಲೇ ಅದನ್ನು ಪರಿಶೀಲಿಸುವ ಜತೆಗೆ ಅಲ್ಲಿ ಹಸಿರು ಪಟಾಕಿಯಲ್ಲದೆ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು.

ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಳಿಗೆಗಳಲ್ಲಿ ಅನಧಿಕೃತವಾಗಿ ಪಟಾಕಿ ಸಂಗ್ರಹಣೆ ಮಾಡಿಕೊಂಡರೆ, ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಸುರಕ್ಷತಾ ಕ್ರಮಗಳನ್ನು ಪೊಲೀಸರು ಪರಿಶೀಲನೆ ನಡೆಸಬೇಕು ಎಂದರು.

ಹಬ್ಬದ ಸಂದರ್ಭದಲ್ಲಿ ರಾತ್ರಿ 08 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಿದೆ. ಹಸಿರು ಪಟಾಕಿಗಳನ್ನು ಬಿಟ್ಟು ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಡಿವೈಎಸ್ಪಿ ರವಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

16 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

22 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago