ದೀಪಾವಳಿ ಹಬ್ಬದಂದು ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಮಾತ್ರ ಅವಕಾಶ

ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸಿ, ವಾಯುಮಾಲಿನ್ಯ ತಡೆಯಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಮಾಡುತ್ತಿದ್ದಲ್ಲಿ, ಕೂಡಲೇ ಅದನ್ನು ಪರಿಶೀಲಿಸುವ ಜತೆಗೆ ಅಲ್ಲಿ ಹಸಿರು ಪಟಾಕಿಯಲ್ಲದೆ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು.

ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಳಿಗೆಗಳಲ್ಲಿ ಅನಧಿಕೃತವಾಗಿ ಪಟಾಕಿ ಸಂಗ್ರಹಣೆ ಮಾಡಿಕೊಂಡರೆ, ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಸುರಕ್ಷತಾ ಕ್ರಮಗಳನ್ನು ಪೊಲೀಸರು ಪರಿಶೀಲನೆ ನಡೆಸಬೇಕು ಎಂದರು.

ಹಬ್ಬದ ಸಂದರ್ಭದಲ್ಲಿ ರಾತ್ರಿ 08 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಿದೆ. ಹಸಿರು ಪಟಾಕಿಗಳನ್ನು ಬಿಟ್ಟು ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಡಿವೈಎಸ್ಪಿ ರವಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

13 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

17 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

17 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

19 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago