ಪ್ರತಿಯೊಬ್ಬರು ವಿಶ್ವ ಮಾನವೀಯತೆಯನ್ನು ಬೆಳಸಿಕೊಳ್ಳಬೇಕು ಎಂದು ಆಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ನಗರದ ಕೆ.ಎಂ.ಹೆಚ್ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಕಿ ಇಲ್ಲದೆ ಹಾಲನ್ನು ಉಕ್ಕಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಸಂಬಂಧಗಳು ಗಟ್ಟಿಯಾಗಬೇಕು, ಮನಸ್ಸು ಮನಸ್ಸುಗಳನ್ನು ಕಟ್ಟುವ ಕೆಲಸ ಆಗಬೇಕು, ಜನರಲ್ಲಿರುವ ಮೌಢ್ಯವನ್ನು ದೂರಗೊಳಿಸುವ ಕೆಲಸ ಆಗಬೇಕಿದೆ, ವಿದ್ಯಾವಂತರಲ್ಲಿಯೇ ಮೌಢ್ಯತೆ ಹೆಚ್ಚಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಆದರ್ಶಗಳನ್ನು ಬಯಸುವ ಬದಲು ತಮ್ಮೊಳಗೆ ಅಳವಡಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಬೇಕಾಗಿದೆ. ಬುದ್ದ, ಬಸವ, ಅಂಬೇಡ್ಕರ್ ಅಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮವಾದ ಸಮಾಜವನ್ನು ಕಟ್ಟುವ ಕೆಲಸ ಆಗಬೇಕಿದೆ. ಬಸವಣ್ಣನವರ ಚಿಂತನೆಯಂತೆ ಪರಿಶುದ್ಧ ಮನಸ್ಸುನಿಂದ ಕೆಲಸ ಮಾಡಬೇಕು.
ತೋಂಟದಾರ್ಯ ಮಠದ ನಿಜಗುಣ ಪ್ರಭು ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಜನತೆ ತನ್ನ ಮೇಲೆ ವಿಶ್ವಾಸ ಕಳೆದುಕೊಂಡು ಇನ್ನೊಬ್ಬರ ಮೇಲೆ ಅವಲಂಬಿತರಾಗಿ ಜೀವಿಸುತ್ತಿದ್ದಾರೆ. ಕಷ್ಟ, ಸಮಸ್ಯೆಗಳಿಗೆ ದುಡಿಮೆಯೇ ಪರಿಹಾರ, ಪೂಜೆ ಪುನಸ್ಕಾರಗಳು ಅಲ್ಲ. ಅಜ್ಞಾನದಿಂದ ಸಮಾಜ ಕತ್ತಲೆಯಲ್ಲಿ ಮುಳುಗಿದೆ. ದುಡಿಮೇಯ ಮೇಲೆ ಭವಿಷ್ಯ ಇದೆ. ಪ್ರಶಸ್ತಿ ಪಡೆದವರು ಮೂಢನಂಬಿಕೆಗೆ ಒಳಪಡದಿರಿ. ಹೆಚ್.ನರಸಿಂಹಯ್ಯನವರ ಜೀವನ ಇಂದಿನ ಯುವ ಜನತೆಗೆ ಮಾದರಿ.
ಸಂವಿಧಾನವನ್ನು ಮಕ್ಕಳಿಗೆ ತಿಳಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ತಿಳುದುಕೊಳ್ಳಬೇಕು. ಇದಕ್ಕೆ ಸರ್ಕಾರ ಯೋಜನೆ ರೂಪಿಸಬೇಕು. ಇಂದು ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸಿಮೀತ ಮಾಡಿದ್ದಾರೆ. ಇದನ್ನು ಅಳಿಸಿ ಹಾಕಬೇಕು ಎಂದರು. ನಿಜವಾಗಿ ಮೌಢ್ಯವನ್ನು ಅನುಸರಿಸುವವರೆ ವಿದ್ಯಾವಂತರಾಗಿದ್ದಾರೆ, ಅನೇಕರು ಜ್ಯೋತಿಷ್ಯದ ಹೆಸರಿನಲ್ಲಿ ಸಮಾಜವನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಪ್ರಕೃತಿ ನೀಡಿದ ಸಹಜವಾದ ಬದುಕನ್ನು ನಡೆಸುವ ಮೂಲಕ ಸರಳವಾಗಿ ಜೀವನವನ್ನು ರೂಪಿಸಿಕೊಳ್ಳಬೇಕು. ಮೊದಲು ಬದುಕುವ ಧರ್ಮವನ್ನು ಪಾಲಿಸಬೇಕಾಗಿದೆ. ನಿಜವಾದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಜೀವನದ ಸಾಕ್ಷರತ್ಕಾರವನ್ನು ಬೆಳೆಸಬೇಕಾಗಿದೆ ಎಂದರು.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೋಪಾಲಗೌಡ ಮಾತನಾಡಿ ಗೌರವ ಸನ್ಮಾನಗಳು ದೊರಕುವುದು ಅವರ ಶ್ರಮದ ಪ್ರತಿಫಲವಾಗಿದೆ, ಯಾವುದೇ ಫಲಾಪೇಕ್ಷೆಯನ್ನು ಬಯಸದೆ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಋಣವನ್ನು ತೀರಿಸುವ ಕಾರ್ಯ ಮೆಚ್ಚುವಂತಹದ್ದಾಗಿದೆ. ನಮ್ಮಲ್ಲಿ ಅನೇಕ ಸಮಸ್ಯೆಗಳು ಇನ್ನೂ ಸಹ ಜೀವಂತವಾಗಿವೆ ಅವುಗಳನ್ನು ಹೋರಾಟ ಮಾಡುವ ಮೂಲಕ ಬಗೆಹರಿಸುವ ಕೆಲಸ ಮಾಡಬೇಕಿದೆ. ತಮ್ಮ ಹಕ್ಕುಗಳನ್ನು ಹೋರಾಟದ ಮೂಲಕವೆ ಪಡೆದುಕೊಳ್ಳುವಂತಾಗಬೇಕಾಗಿದೆ. ಸರ್ಕಾರ ಮಾಡುವಂತಹ ಕಾರ್ಯವನ್ನು ಸಂಸ್ಥೆಯು ನಡೆಸುತ್ತಿರುವುದು ವಿಶೇಷವಾಗಿದೆ.
ಕಾನೂನಿನ ಅರಿವು ಪ್ರತಿಯೊಬ್ಬರಲ್ಲೂ ಇರಬೇಕಾಗಿದೆ, ನೈಜವಾದ ಕಾನೂನುಗಳನ್ನು ತಿಳಿದುಕೊಳ್ಳಬೇಕು ಅದಕ್ಕೆ ಪೂರಕವಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಂವಿಧಾನದ ಅರಿವು ಆಗಬೇಕಾಗಿದೆ ಎಂದರು.
ಈ ವೇಳೆ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್, ಶಾಸಕ ಧೀರಜ್ ಮುನಿರಾಜ್, ಎನ್.ಬಿ.ಎಸ್.ಎಸ್ ನ ಅಧ್ಯಕ್ಷ ಡಾ.ಸೋಮಶೇಖರ್, ಗಣ್ಯರಾದ ಕೇಂದ್ರ ಸರ್ಕಾರದ ಅಧಿಕಾರಿ ನರಂಸಿಂಹರಾಜು, ಕೆ.ಎಂ.ಹನುಮಂತರಾಯಪ್ಪ, ವೈದ್ಯ ಡಾ.ಅಂಜಿನಪ್ಪ, ಡಾ.ಜಿ.ಎಸ್.ಶ್ರೀಧರ್, ಹಂಪಿಕೆರೆ ರಾಜೇಂದ್ರ ಹೊಸಪೇಟೆ, ಇಂದುಮತಿ ಸಾಲಿಮಠ, ಬಿ.ಎಂ.ಇರ್ಷಾದ್ ಅಹಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…