ದುಡಿಮೆಯೇ ಕಷ್ಟಗಳಿಗೆ ಪರಿಹಾರ, ಪೂಜೆ ಪುನಸ್ಕಾರವಲ್ಲ: ತೋಂಟದಾರ್ಯ ಮಠದ ನಿಜಗುಣ ಸ್ವಾಮೀಜಿ ಅಭಿಮತ

ಪ್ರತಿಯೊಬ್ಬರು ವಿಶ್ವ ಮಾನವೀಯತೆಯನ್ನು ಬೆಳಸಿಕೊಳ್ಳಬೇಕು ಎಂದು ಆಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ನಗರದ ಕೆ.ಎಂ.ಹೆಚ್ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಕಿ ಇಲ್ಲದೆ ಹಾಲನ್ನು ಉಕ್ಕಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಸಂಬಂಧಗಳು ಗಟ್ಟಿಯಾಗಬೇಕು, ಮನಸ್ಸು ಮನಸ್ಸುಗಳನ್ನು ಕಟ್ಟುವ ಕೆಲಸ ಆಗಬೇಕು, ಜನರಲ್ಲಿರುವ ಮೌಢ್ಯವನ್ನು ದೂರಗೊಳಿಸುವ ಕೆಲಸ ಆಗಬೇಕಿದೆ, ವಿದ್ಯಾವಂತರಲ್ಲಿಯೇ ಮೌಢ್ಯತೆ ಹೆಚ್ಚಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಆದರ್ಶಗಳನ್ನು ಬಯಸುವ ಬದಲು ತಮ್ಮೊಳಗೆ ಅಳವಡಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಬೇಕಾಗಿದೆ. ಬುದ್ದ, ಬಸವ, ಅಂಬೇಡ್ಕರ್ ಅಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮವಾದ ಸಮಾಜವನ್ನು ಕಟ್ಟುವ ಕೆಲಸ ಆಗಬೇಕಿದೆ. ಬಸವಣ್ಣನವರ ಚಿಂತನೆಯಂತೆ ಪರಿಶುದ್ಧ ಮನಸ್ಸುನಿಂದ ಕೆಲಸ ಮಾಡಬೇಕು.

ಯಾವುದೇ ಕೆಲಸ ಇರಲಿ ಆಯಾ ಕೆಲಸದಲ್ಲಿ ಶ್ರದ್ಧಾ ಭಕ್ತಿ ಇರಬೆಕು. ಅಂತಹ ಕಾಯಕ ಯೋಗಿಗಳನ್ನಯ ಗರುತಿಸಿ ಸನ್ಮಾನಿಸುವುದು ಶ್ಲಾಘನೀಯ. ನಿಜಗುಣ ಸ್ವಾಮೀಜಿಗಳು ಜಾತಿ, ಧರ್ಮ, ಕೆಲಸ ಯಾವುದನ್ನು ಲೆಕ್ಕಿಸದೆ ಸಮಾಜಕ್ಕಾಗಿ ನ್ಯಾಯಬದ್ಧವಾಗಿ ಕೆಲಸ ಮಾಡುತ್ತಿರುವುದು ಅಭಿನಂದನೀಯ. ಬಸವೇಶ್ವರ ಚಿಂತನೆಗಳು ಕಪಿಮುಷ್ಟಿಗಳ ಕೈ ಸಿಲುಕಿ ನಲುಗಿತ್ತಿವೆ. ವೈಜ್ಞಾನಿಕವಾಗಿ ಚಿಂತನೆ ಮಾಡುವಂತ ಜನ ಮುನ್ನೆಲೆಗೆ ಬರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣ ಪ್ರಮಾಣದಲ್ಲಿ ವೈಜ್ಞಾನಿಕವಾಗಿ ಚಿಂತನೆ ಮಾಡುತ್ತಾರೆ ಎಂದರು.

ತೋಂಟದಾರ್ಯ ಮಠದ ನಿಜಗುಣ ಪ್ರಭು ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಜನತೆ ತನ್ನ ಮೇಲೆ ವಿಶ್ವಾಸ ಕಳೆದುಕೊಂಡು ಇನ್ನೊಬ್ಬರ ಮೇಲೆ ಅವಲಂಬಿತರಾಗಿ ಜೀವಿಸುತ್ತಿದ್ದಾರೆ. ಕಷ್ಟ, ಸಮಸ್ಯೆಗಳಿಗೆ ದುಡಿಮೆಯೇ ಪರಿಹಾರ, ಪೂಜೆ ಪುನಸ್ಕಾರಗಳು ಅಲ್ಲ. ಅಜ್ಞಾನದಿಂದ ಸಮಾಜ ಕತ್ತಲೆಯಲ್ಲಿ ಮುಳುಗಿದೆ. ದುಡಿಮೇಯ ಮೇಲೆ ಭವಿಷ್ಯ ಇದೆ. ಪ್ರಶಸ್ತಿ ಪಡೆದವರು ಮೂಢನಂಬಿಕೆಗೆ ಒಳಪಡದಿರಿ. ಹೆಚ್.ನರಸಿಂಹಯ್ಯನವರ ಜೀವನ ಇಂದಿನ ಯುವ ಜನತೆಗೆ ಮಾದರಿ.

ಸಂವಿಧಾನವನ್ನು ಮಕ್ಕಳಿಗೆ ತಿಳಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ತಿಳುದುಕೊಳ್ಳಬೇಕು. ಇದಕ್ಕೆ ಸರ್ಕಾರ ಯೋಜನೆ ರೂಪಿಸಬೇಕು. ಇಂದು ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸಿಮೀತ ಮಾಡಿದ್ದಾರೆ. ಇದನ್ನು ಅಳಿಸಿ ಹಾಕಬೇಕು ಎಂದರು. ನಿಜವಾಗಿ ಮೌಢ್ಯವನ್ನು ಅನುಸರಿಸುವವರೆ ವಿದ್ಯಾವಂತರಾಗಿದ್ದಾರೆ, ಅನೇಕರು ಜ್ಯೋತಿಷ್ಯದ ಹೆಸರಿನಲ್ಲಿ ಸಮಾಜವನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಪ್ರಕೃತಿ ನೀಡಿದ ಸಹಜವಾದ ಬದುಕನ್ನು ನಡೆಸುವ ಮೂಲಕ ಸರಳವಾಗಿ ಜೀವನವನ್ನು ರೂಪಿಸಿಕೊಳ್ಳಬೇಕು. ಮೊದಲು ಬದುಕುವ ಧರ್ಮವನ್ನು ಪಾಲಿಸಬೇಕಾಗಿದೆ. ನಿಜವಾದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಜೀವನದ ಸಾಕ್ಷರತ್ಕಾರವನ್ನು ಬೆಳೆಸಬೇಕಾಗಿದೆ ಎಂದರು.

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೋಪಾಲಗೌಡ ಮಾತನಾಡಿ ಗೌರವ ಸನ್ಮಾನಗಳು ದೊರಕುವುದು ಅವರ ಶ್ರಮದ ಪ್ರತಿಫಲವಾಗಿದೆ, ಯಾವುದೇ ಫಲಾಪೇಕ್ಷೆಯನ್ನು ಬಯಸದೆ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಋಣವನ್ನು ತೀರಿಸುವ ಕಾರ್ಯ ಮೆಚ್ಚುವಂತಹದ್ದಾಗಿದೆ. ನಮ್ಮಲ್ಲಿ ಅನೇಕ ಸಮಸ್ಯೆಗಳು ಇನ್ನೂ ಸಹ ಜೀವಂತವಾಗಿವೆ ಅವುಗಳನ್ನು ಹೋರಾಟ ಮಾಡುವ ಮೂಲಕ ಬಗೆಹರಿಸುವ ಕೆಲಸ ಮಾಡಬೇಕಿದೆ. ತಮ್ಮ ಹಕ್ಕುಗಳನ್ನು ಹೋರಾಟದ ಮೂಲಕವೆ ಪಡೆದುಕೊಳ್ಳುವಂತಾಗಬೇಕಾಗಿದೆ. ಸರ್ಕಾರ ಮಾಡುವಂತಹ ಕಾರ್ಯವನ್ನು ಸಂಸ್ಥೆಯು ನಡೆಸುತ್ತಿರುವುದು ವಿಶೇಷವಾಗಿದೆ.
ಕಾನೂನಿನ ಅರಿವು ಪ್ರತಿಯೊಬ್ಬರಲ್ಲೂ ಇರಬೇಕಾಗಿದೆ, ನೈಜವಾದ ಕಾನೂನುಗಳನ್ನು ತಿಳಿದುಕೊಳ್ಳಬೇಕು ಅದಕ್ಕೆ ಪೂರಕವಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಂವಿಧಾನದ ಅರಿವು ಆಗಬೇಕಾಗಿದೆ ಎಂದರು.

ಈ ವೇಳೆ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್, ಶಾಸಕ ಧೀರಜ್ ಮುನಿರಾಜ್, ಎನ್.ಬಿ.ಎಸ್.ಎಸ್ ನ ಅಧ್ಯಕ್ಷ ಡಾ.ಸೋಮಶೇಖರ್, ಗಣ್ಯರಾದ ಕೇಂದ್ರ ಸರ್ಕಾರದ ಅಧಿಕಾರಿ ನರಂಸಿಂಹರಾಜು, ಕೆ.ಎಂ.ಹನುಮಂತರಾಯಪ್ಪ, ವೈದ್ಯ ಡಾ.ಅಂಜಿನಪ್ಪ, ಡಾ.ಜಿ.ಎಸ್.ಶ್ರೀಧರ್, ಹಂಪಿಕೆರೆ ರಾಜೇಂದ್ರ ಹೊಸಪೇಟೆ, ಇಂದುಮತಿ ಸಾಲಿಮಠ, ಬಿ.ಎಂ.ಇರ್ಷಾದ್ ಅಹಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago