ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಟ್ಯಾಬ್ಲೆಟ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬನ ಬಳಿ ಪರಿಶೀಲನೆ ನಡೆಸಿದ ವೇಳೆ 24 ಕ್ಯಾರೆಟ್ನ 899.50 ಗ್ರಾಂ ತೂಕದ ಗೋಲ್ಡ್ ಬಿಸ್ಕೆಟ್ ಪತ್ತೆಯಾಗಿದೆ.
ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ₹1.37 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಸಂದೇಹಾಸ್ಪದವಾಗಿ 4 ಕ್ಯಾಪ್ಸುಲ್ಗಳಲ್ಲಿ ಚಿನ್ನದ ಪೇಸ್ಟ್ನಲ್ಲಿ ಮರೆಮಾಚಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಕಾಯ್ದೆಯಡಿ ಕ್ರಮ ಜರುಗಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮ ಚಿನ್ನ ಸಾಗಾಟ ತಡೆಗಟ್ಟಲು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಮತ್ತಷ್ಟು ಬಿಗಿಗೊಳಿಸಲಾಗಿದೆ.
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…
ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…