ದುಷ್ಕರ್ಮಿಗಳಿಂದ ಹೇಯ ಕೃತ್ಯ: ಫಸಲುಯುಕ್ತ ದ್ರಾಕ್ಷಿ ತೋಟ ನಾಶ

ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ ಮೂಲಕ ರೋಷಾವೇಶ ತೋರ್ಪಡಿಸಿಕೊಳ್ಳೋದು ಎಷ್ಟು ಸರಿ…. ಅಂತದೊಂದು ಘಟನೆಗೆ ತಡರಾತ್ರಿ ಚಿಕ್ಕಬಳ್ಳಾಪುರದ ಗ್ರಾಮವೊಂದರಲ್ಲಿ ನಡೆದಿದೆ….

ಚಿಕ್ಕಬಳ್ಳಾಪುರ ತಾಲ್ಲೂಕು ಕೊಂಡೇನಹಳ್ಳಿ-ಕಡಶೀಗನಹಳ್ಳಿ ಮಧ್ಯೆ ಇರುವ ಕಾಂತಮ್ಮ ನಾರಾಯಣಸ್ವಾಮಿ ಹೆಸರಿಗೆ ಸೇರಿದ ಎರಡು ಎಕರೆಯಲ್ಲಿ ಹಾಕಿದ್ದ ದ್ರಾಕ್ಷಿ ತೋಟ ಫಸಲಿಗೆ ಬಂದಿತ್ತು.

ತಡರಾತ್ರಿ ಏಕಾಏಕಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 50 ರಿಂದ 60 ದ್ರಾಕ್ಷಿ ಗಿಡಗಳು,‌ ದ್ರಾಕ್ಷಿ ಚಪ್ಪರದ ಚಪ್ಪಡಿಗಳು, ಪೆನ್ಸಿಂಗ್ ಮೆಶ್ ಬಲೆ, ದ್ರಾಕ್ಷಿಗೆ ಅಳವಡಿಸಿದ್ದ ಡ್ರಿಪ್ ಪೈಪುಗಳನ್ನು ಕತ್ತರಿಸಿ ನೆಳಕ್ಕುರುಳಿಸಿದ್ದಾರೆ.

ಸುಮಾರು ಇಪ್ಪತೈದು ಜನ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಕೃತ್ಯದಿಂದ ಸುಮಾರು ಹತ್ತು ಲಕ್ಷದಷ್ಟು ನಷ್ಟ ಹೊಂದಿರಬಹುದು ಎನ್ನಲಾಗಿದೆ.

ಈ ಕೃತ್ಯದ ಬಗ್ಗೆ ಮಾತನಾಡಿರುವ ಮಾಲೀಕ ನಾರಾಯಣಸ್ವಾಮಿ, ರಸ್ತೆ ವಿಚಾರವಾಗಿ ಅಕಾಶ್, ರತ್ನಮ್ಮ, ಶಿವಕುಮಾರ್ ಕುಟುಂಬದ ಜತೆ ವ್ಯಾಜ್ಯವಿತ್ತು. ಈ ಹಿಂದೆಯೂ ಸಹ ಒಮ್ಮೆ ಹೀಗಾಗಿತ್ತು. ಆ ದಿನ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರೂ ಕ್ರಮ ಜರುಗಿಸಲಿಲ್ಲ. ಅದೆ ದೈರ್ಯದ ಮೇಲೆ ಇವತ್ತು ಈ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಅಷ್ಟೊತ್ತಲ್ಲಿ ನಾವೇನಾದ್ರು ಅಡ್ಡಬಂದಿದ್ದರೆ ನಮಗೂ ಸಾವು ಕಾದಿತ್ತೇನೋ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ಕೊಟ್ಟಿದ್ದೇವೆ. ಈ ಬಾರಿಯಾದ್ರು ಈ ಘಟನೆಗೆ ಕಾರಣರಾದವನ್ನ, ಅವರ ಹಿಂಬಾಲಕರನ್ನ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಅವಲತ್ತುಕೊಂಡಿದ್ದಾರೆ.

ನಾರಾಯಣಸ್ವಾಮಿ ಪುತ್ರ ಪ್ರದೀಪ್ ಮಾತನಾಡಿ, ರಾಕ್ಷಸರು ಮಾಡೋ ಕೆಲಸ ಮಾಡಿದ್ದಾರೆ. ಅವರ ಜತೆ ಬಂದಿದ್ದಂತಹ ಎಲ್ಲ ಗ್ಯಾಂಗ್ ನ್ನು ಬಂಧಿಸಬೇಕು. ಅವರನ್ನ ಬೀದಿಯಲ್ಲಿ ಮೆರವಣಿಗೆ ಮಾಡಬೇಕು. ಹಾಕಿದ್ದ ಬಂಡವಾಳ ಕೈಗೆ ಸಿಗುತ್ತೆ ಅಂತ ಆಸೆಗಣ್ಣುಗಳಿಂದ ಕಾಯುತಿದ್ದ ವೇಳೆ ಫಸಲು ತುಂಬಿದ ದ್ರಾಕ್ಷಿಯನ್ನ ಕತ್ತರಿಸಿ ಬಿಸಾಕಿದ ದರುಳರನ್ನ ಕೂಡಲೆ ಬಂಧಿಸಿ ಕ್ರಮ ಜರುಗಿಸಬೇಕೆಂದು ಎಸ್ ಪಿ ಕುಶಾಲ್ ಚೌಕ್ಸೆಯಲ್ಲಿ ಮನವಿ ಮಾಡಿದ್ದಾರೆ.

ಇನ್ನೂ ನಂದಿಗಿರಿಧಾಮ ಪೊಲೀಸರು ದೂರು ಬಂದ ಕೂಡಲೆ ಎಚ್ವೆತ್ತುಕೊಂಡು ಈ ಕೃತ್ಯದಲ್ಲಿ ಪಾಲ್ಗೊಂಡವರನ್ನ ಬಂಧಿಸಿ ಅನ್ಯಾಯಕ್ಕೊಳಗಾದ ರೈತರ ಅಳಲಿಗೆ ಸ್ಪಂದಿಸುವರೆ ಕಾದು ನೋಡಬೇಕಿದೆ….

Ramesh Babu

Journalist

Share
Published by
Ramesh Babu

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

4 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

16 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

16 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

17 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

18 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

21 hours ago