ದುಷ್ಕರ್ಮಿಗಳಿಂದ ಹೇಯ ಕೃತ್ಯ: ಫಸಲುಯುಕ್ತ ದ್ರಾಕ್ಷಿ ತೋಟ ನಾಶ

ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ ಮೂಲಕ ರೋಷಾವೇಶ ತೋರ್ಪಡಿಸಿಕೊಳ್ಳೋದು ಎಷ್ಟು ಸರಿ…. ಅಂತದೊಂದು ಘಟನೆಗೆ ತಡರಾತ್ರಿ ಚಿಕ್ಕಬಳ್ಳಾಪುರದ ಗ್ರಾಮವೊಂದರಲ್ಲಿ ನಡೆದಿದೆ….

ಚಿಕ್ಕಬಳ್ಳಾಪುರ ತಾಲ್ಲೂಕು ಕೊಂಡೇನಹಳ್ಳಿ-ಕಡಶೀಗನಹಳ್ಳಿ ಮಧ್ಯೆ ಇರುವ ಕಾಂತಮ್ಮ ನಾರಾಯಣಸ್ವಾಮಿ ಹೆಸರಿಗೆ ಸೇರಿದ ಎರಡು ಎಕರೆಯಲ್ಲಿ ಹಾಕಿದ್ದ ದ್ರಾಕ್ಷಿ ತೋಟ ಫಸಲಿಗೆ ಬಂದಿತ್ತು.

ತಡರಾತ್ರಿ ಏಕಾಏಕಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 50 ರಿಂದ 60 ದ್ರಾಕ್ಷಿ ಗಿಡಗಳು,‌ ದ್ರಾಕ್ಷಿ ಚಪ್ಪರದ ಚಪ್ಪಡಿಗಳು, ಪೆನ್ಸಿಂಗ್ ಮೆಶ್ ಬಲೆ, ದ್ರಾಕ್ಷಿಗೆ ಅಳವಡಿಸಿದ್ದ ಡ್ರಿಪ್ ಪೈಪುಗಳನ್ನು ಕತ್ತರಿಸಿ ನೆಳಕ್ಕುರುಳಿಸಿದ್ದಾರೆ.

ಸುಮಾರು ಇಪ್ಪತೈದು ಜನ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಕೃತ್ಯದಿಂದ ಸುಮಾರು ಹತ್ತು ಲಕ್ಷದಷ್ಟು ನಷ್ಟ ಹೊಂದಿರಬಹುದು ಎನ್ನಲಾಗಿದೆ.

ಈ ಕೃತ್ಯದ ಬಗ್ಗೆ ಮಾತನಾಡಿರುವ ಮಾಲೀಕ ನಾರಾಯಣಸ್ವಾಮಿ, ರಸ್ತೆ ವಿಚಾರವಾಗಿ ಅಕಾಶ್, ರತ್ನಮ್ಮ, ಶಿವಕುಮಾರ್ ಕುಟುಂಬದ ಜತೆ ವ್ಯಾಜ್ಯವಿತ್ತು. ಈ ಹಿಂದೆಯೂ ಸಹ ಒಮ್ಮೆ ಹೀಗಾಗಿತ್ತು. ಆ ದಿನ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರೂ ಕ್ರಮ ಜರುಗಿಸಲಿಲ್ಲ. ಅದೆ ದೈರ್ಯದ ಮೇಲೆ ಇವತ್ತು ಈ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಅಷ್ಟೊತ್ತಲ್ಲಿ ನಾವೇನಾದ್ರು ಅಡ್ಡಬಂದಿದ್ದರೆ ನಮಗೂ ಸಾವು ಕಾದಿತ್ತೇನೋ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ಕೊಟ್ಟಿದ್ದೇವೆ. ಈ ಬಾರಿಯಾದ್ರು ಈ ಘಟನೆಗೆ ಕಾರಣರಾದವನ್ನ, ಅವರ ಹಿಂಬಾಲಕರನ್ನ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಅವಲತ್ತುಕೊಂಡಿದ್ದಾರೆ.

ನಾರಾಯಣಸ್ವಾಮಿ ಪುತ್ರ ಪ್ರದೀಪ್ ಮಾತನಾಡಿ, ರಾಕ್ಷಸರು ಮಾಡೋ ಕೆಲಸ ಮಾಡಿದ್ದಾರೆ. ಅವರ ಜತೆ ಬಂದಿದ್ದಂತಹ ಎಲ್ಲ ಗ್ಯಾಂಗ್ ನ್ನು ಬಂಧಿಸಬೇಕು. ಅವರನ್ನ ಬೀದಿಯಲ್ಲಿ ಮೆರವಣಿಗೆ ಮಾಡಬೇಕು. ಹಾಕಿದ್ದ ಬಂಡವಾಳ ಕೈಗೆ ಸಿಗುತ್ತೆ ಅಂತ ಆಸೆಗಣ್ಣುಗಳಿಂದ ಕಾಯುತಿದ್ದ ವೇಳೆ ಫಸಲು ತುಂಬಿದ ದ್ರಾಕ್ಷಿಯನ್ನ ಕತ್ತರಿಸಿ ಬಿಸಾಕಿದ ದರುಳರನ್ನ ಕೂಡಲೆ ಬಂಧಿಸಿ ಕ್ರಮ ಜರುಗಿಸಬೇಕೆಂದು ಎಸ್ ಪಿ ಕುಶಾಲ್ ಚೌಕ್ಸೆಯಲ್ಲಿ ಮನವಿ ಮಾಡಿದ್ದಾರೆ.

ಇನ್ನೂ ನಂದಿಗಿರಿಧಾಮ ಪೊಲೀಸರು ದೂರು ಬಂದ ಕೂಡಲೆ ಎಚ್ವೆತ್ತುಕೊಂಡು ಈ ಕೃತ್ಯದಲ್ಲಿ ಪಾಲ್ಗೊಂಡವರನ್ನ ಬಂಧಿಸಿ ಅನ್ಯಾಯಕ್ಕೊಳಗಾದ ರೈತರ ಅಳಲಿಗೆ ಸ್ಪಂದಿಸುವರೆ ಕಾದು ನೋಡಬೇಕಿದೆ….

Ramesh Babu

Journalist

Recent Posts

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

10 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

13 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

21 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

1 day ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

2 days ago