ದುಷ್ಕರ್ಮಿಗಳಿಂದ ಹೇಯ ಕೃತ್ಯ: ಫಸಲುಯುಕ್ತ ದ್ರಾಕ್ಷಿ ತೋಟ ನಾಶ

ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ ಮೂಲಕ ರೋಷಾವೇಶ ತೋರ್ಪಡಿಸಿಕೊಳ್ಳೋದು ಎಷ್ಟು ಸರಿ…. ಅಂತದೊಂದು ಘಟನೆಗೆ ತಡರಾತ್ರಿ ಚಿಕ್ಕಬಳ್ಳಾಪುರದ ಗ್ರಾಮವೊಂದರಲ್ಲಿ ನಡೆದಿದೆ….

ಚಿಕ್ಕಬಳ್ಳಾಪುರ ತಾಲ್ಲೂಕು ಕೊಂಡೇನಹಳ್ಳಿ-ಕಡಶೀಗನಹಳ್ಳಿ ಮಧ್ಯೆ ಇರುವ ಕಾಂತಮ್ಮ ನಾರಾಯಣಸ್ವಾಮಿ ಹೆಸರಿಗೆ ಸೇರಿದ ಎರಡು ಎಕರೆಯಲ್ಲಿ ಹಾಕಿದ್ದ ದ್ರಾಕ್ಷಿ ತೋಟ ಫಸಲಿಗೆ ಬಂದಿತ್ತು.

ತಡರಾತ್ರಿ ಏಕಾಏಕಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 50 ರಿಂದ 60 ದ್ರಾಕ್ಷಿ ಗಿಡಗಳು,‌ ದ್ರಾಕ್ಷಿ ಚಪ್ಪರದ ಚಪ್ಪಡಿಗಳು, ಪೆನ್ಸಿಂಗ್ ಮೆಶ್ ಬಲೆ, ದ್ರಾಕ್ಷಿಗೆ ಅಳವಡಿಸಿದ್ದ ಡ್ರಿಪ್ ಪೈಪುಗಳನ್ನು ಕತ್ತರಿಸಿ ನೆಳಕ್ಕುರುಳಿಸಿದ್ದಾರೆ.

ಸುಮಾರು ಇಪ್ಪತೈದು ಜನ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಕೃತ್ಯದಿಂದ ಸುಮಾರು ಹತ್ತು ಲಕ್ಷದಷ್ಟು ನಷ್ಟ ಹೊಂದಿರಬಹುದು ಎನ್ನಲಾಗಿದೆ.

ಈ ಕೃತ್ಯದ ಬಗ್ಗೆ ಮಾತನಾಡಿರುವ ಮಾಲೀಕ ನಾರಾಯಣಸ್ವಾಮಿ, ರಸ್ತೆ ವಿಚಾರವಾಗಿ ಅಕಾಶ್, ರತ್ನಮ್ಮ, ಶಿವಕುಮಾರ್ ಕುಟುಂಬದ ಜತೆ ವ್ಯಾಜ್ಯವಿತ್ತು. ಈ ಹಿಂದೆಯೂ ಸಹ ಒಮ್ಮೆ ಹೀಗಾಗಿತ್ತು. ಆ ದಿನ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರೂ ಕ್ರಮ ಜರುಗಿಸಲಿಲ್ಲ. ಅದೆ ದೈರ್ಯದ ಮೇಲೆ ಇವತ್ತು ಈ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಅಷ್ಟೊತ್ತಲ್ಲಿ ನಾವೇನಾದ್ರು ಅಡ್ಡಬಂದಿದ್ದರೆ ನಮಗೂ ಸಾವು ಕಾದಿತ್ತೇನೋ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ಕೊಟ್ಟಿದ್ದೇವೆ. ಈ ಬಾರಿಯಾದ್ರು ಈ ಘಟನೆಗೆ ಕಾರಣರಾದವನ್ನ, ಅವರ ಹಿಂಬಾಲಕರನ್ನ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಅವಲತ್ತುಕೊಂಡಿದ್ದಾರೆ.

ನಾರಾಯಣಸ್ವಾಮಿ ಪುತ್ರ ಪ್ರದೀಪ್ ಮಾತನಾಡಿ, ರಾಕ್ಷಸರು ಮಾಡೋ ಕೆಲಸ ಮಾಡಿದ್ದಾರೆ. ಅವರ ಜತೆ ಬಂದಿದ್ದಂತಹ ಎಲ್ಲ ಗ್ಯಾಂಗ್ ನ್ನು ಬಂಧಿಸಬೇಕು. ಅವರನ್ನ ಬೀದಿಯಲ್ಲಿ ಮೆರವಣಿಗೆ ಮಾಡಬೇಕು. ಹಾಕಿದ್ದ ಬಂಡವಾಳ ಕೈಗೆ ಸಿಗುತ್ತೆ ಅಂತ ಆಸೆಗಣ್ಣುಗಳಿಂದ ಕಾಯುತಿದ್ದ ವೇಳೆ ಫಸಲು ತುಂಬಿದ ದ್ರಾಕ್ಷಿಯನ್ನ ಕತ್ತರಿಸಿ ಬಿಸಾಕಿದ ದರುಳರನ್ನ ಕೂಡಲೆ ಬಂಧಿಸಿ ಕ್ರಮ ಜರುಗಿಸಬೇಕೆಂದು ಎಸ್ ಪಿ ಕುಶಾಲ್ ಚೌಕ್ಸೆಯಲ್ಲಿ ಮನವಿ ಮಾಡಿದ್ದಾರೆ.

ಇನ್ನೂ ನಂದಿಗಿರಿಧಾಮ ಪೊಲೀಸರು ದೂರು ಬಂದ ಕೂಡಲೆ ಎಚ್ವೆತ್ತುಕೊಂಡು ಈ ಕೃತ್ಯದಲ್ಲಿ ಪಾಲ್ಗೊಂಡವರನ್ನ ಬಂಧಿಸಿ ಅನ್ಯಾಯಕ್ಕೊಳಗಾದ ರೈತರ ಅಳಲಿಗೆ ಸ್ಪಂದಿಸುವರೆ ಕಾದು ನೋಡಬೇಕಿದೆ….

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

43 minutes ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

1 hour ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

7 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

8 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

12 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

13 hours ago