ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ ಮೂಲಕ ರೋಷಾವೇಶ ತೋರ್ಪಡಿಸಿಕೊಳ್ಳೋದು ಎಷ್ಟು ಸರಿ…. ಅಂತದೊಂದು ಘಟನೆಗೆ ತಡರಾತ್ರಿ ಚಿಕ್ಕಬಳ್ಳಾಪುರದ ಗ್ರಾಮವೊಂದರಲ್ಲಿ ನಡೆದಿದೆ….
ಚಿಕ್ಕಬಳ್ಳಾಪುರ ತಾಲ್ಲೂಕು ಕೊಂಡೇನಹಳ್ಳಿ-ಕಡಶೀಗನಹಳ್ಳಿ ಮಧ್ಯೆ ಇರುವ ಕಾಂತಮ್ಮ ನಾರಾಯಣಸ್ವಾಮಿ ಹೆಸರಿಗೆ ಸೇರಿದ ಎರಡು ಎಕರೆಯಲ್ಲಿ ಹಾಕಿದ್ದ ದ್ರಾಕ್ಷಿ ತೋಟ ಫಸಲಿಗೆ ಬಂದಿತ್ತು.
ತಡರಾತ್ರಿ ಏಕಾಏಕಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 50 ರಿಂದ 60 ದ್ರಾಕ್ಷಿ ಗಿಡಗಳು, ದ್ರಾಕ್ಷಿ ಚಪ್ಪರದ ಚಪ್ಪಡಿಗಳು, ಪೆನ್ಸಿಂಗ್ ಮೆಶ್ ಬಲೆ, ದ್ರಾಕ್ಷಿಗೆ ಅಳವಡಿಸಿದ್ದ ಡ್ರಿಪ್ ಪೈಪುಗಳನ್ನು ಕತ್ತರಿಸಿ ನೆಳಕ್ಕುರುಳಿಸಿದ್ದಾರೆ.
ಸುಮಾರು ಇಪ್ಪತೈದು ಜನ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಕೃತ್ಯದಿಂದ ಸುಮಾರು ಹತ್ತು ಲಕ್ಷದಷ್ಟು ನಷ್ಟ ಹೊಂದಿರಬಹುದು ಎನ್ನಲಾಗಿದೆ.
ಈ ಕೃತ್ಯದ ಬಗ್ಗೆ ಮಾತನಾಡಿರುವ ಮಾಲೀಕ ನಾರಾಯಣಸ್ವಾಮಿ, ರಸ್ತೆ ವಿಚಾರವಾಗಿ ಅಕಾಶ್, ರತ್ನಮ್ಮ, ಶಿವಕುಮಾರ್ ಕುಟುಂಬದ ಜತೆ ವ್ಯಾಜ್ಯವಿತ್ತು. ಈ ಹಿಂದೆಯೂ ಸಹ ಒಮ್ಮೆ ಹೀಗಾಗಿತ್ತು. ಆ ದಿನ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರೂ ಕ್ರಮ ಜರುಗಿಸಲಿಲ್ಲ. ಅದೆ ದೈರ್ಯದ ಮೇಲೆ ಇವತ್ತು ಈ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಅಷ್ಟೊತ್ತಲ್ಲಿ ನಾವೇನಾದ್ರು ಅಡ್ಡಬಂದಿದ್ದರೆ ನಮಗೂ ಸಾವು ಕಾದಿತ್ತೇನೋ ಎಂಬ ಅನುಮಾನ ವ್ಯಕ್ತಪಡಿಸಿದರು.
ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ಕೊಟ್ಟಿದ್ದೇವೆ. ಈ ಬಾರಿಯಾದ್ರು ಈ ಘಟನೆಗೆ ಕಾರಣರಾದವನ್ನ, ಅವರ ಹಿಂಬಾಲಕರನ್ನ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಅವಲತ್ತುಕೊಂಡಿದ್ದಾರೆ.
ನಾರಾಯಣಸ್ವಾಮಿ ಪುತ್ರ ಪ್ರದೀಪ್ ಮಾತನಾಡಿ, ರಾಕ್ಷಸರು ಮಾಡೋ ಕೆಲಸ ಮಾಡಿದ್ದಾರೆ. ಅವರ ಜತೆ ಬಂದಿದ್ದಂತಹ ಎಲ್ಲ ಗ್ಯಾಂಗ್ ನ್ನು ಬಂಧಿಸಬೇಕು. ಅವರನ್ನ ಬೀದಿಯಲ್ಲಿ ಮೆರವಣಿಗೆ ಮಾಡಬೇಕು. ಹಾಕಿದ್ದ ಬಂಡವಾಳ ಕೈಗೆ ಸಿಗುತ್ತೆ ಅಂತ ಆಸೆಗಣ್ಣುಗಳಿಂದ ಕಾಯುತಿದ್ದ ವೇಳೆ ಫಸಲು ತುಂಬಿದ ದ್ರಾಕ್ಷಿಯನ್ನ ಕತ್ತರಿಸಿ ಬಿಸಾಕಿದ ದರುಳರನ್ನ ಕೂಡಲೆ ಬಂಧಿಸಿ ಕ್ರಮ ಜರುಗಿಸಬೇಕೆಂದು ಎಸ್ ಪಿ ಕುಶಾಲ್ ಚೌಕ್ಸೆಯಲ್ಲಿ ಮನವಿ ಮಾಡಿದ್ದಾರೆ.
ಇನ್ನೂ ನಂದಿಗಿರಿಧಾಮ ಪೊಲೀಸರು ದೂರು ಬಂದ ಕೂಡಲೆ ಎಚ್ವೆತ್ತುಕೊಂಡು ಈ ಕೃತ್ಯದಲ್ಲಿ ಪಾಲ್ಗೊಂಡವರನ್ನ ಬಂಧಿಸಿ ಅನ್ಯಾಯಕ್ಕೊಳಗಾದ ರೈತರ ಅಳಲಿಗೆ ಸ್ಪಂದಿಸುವರೆ ಕಾದು ನೋಡಬೇಕಿದೆ….
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…