ದುಷ್ಕರ್ಮಿಗಳಿಂದ ಹೇಯ ಕೃತ್ಯ: ಫಸಲುಯುಕ್ತ ದ್ರಾಕ್ಷಿ ತೋಟ ನಾಶ

ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ ಮೂಲಕ ರೋಷಾವೇಶ ತೋರ್ಪಡಿಸಿಕೊಳ್ಳೋದು ಎಷ್ಟು ಸರಿ…. ಅಂತದೊಂದು ಘಟನೆಗೆ ತಡರಾತ್ರಿ ಚಿಕ್ಕಬಳ್ಳಾಪುರದ ಗ್ರಾಮವೊಂದರಲ್ಲಿ ನಡೆದಿದೆ….

ಚಿಕ್ಕಬಳ್ಳಾಪುರ ತಾಲ್ಲೂಕು ಕೊಂಡೇನಹಳ್ಳಿ-ಕಡಶೀಗನಹಳ್ಳಿ ಮಧ್ಯೆ ಇರುವ ಕಾಂತಮ್ಮ ನಾರಾಯಣಸ್ವಾಮಿ ಹೆಸರಿಗೆ ಸೇರಿದ ಎರಡು ಎಕರೆಯಲ್ಲಿ ಹಾಕಿದ್ದ ದ್ರಾಕ್ಷಿ ತೋಟ ಫಸಲಿಗೆ ಬಂದಿತ್ತು.

ತಡರಾತ್ರಿ ಏಕಾಏಕಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 50 ರಿಂದ 60 ದ್ರಾಕ್ಷಿ ಗಿಡಗಳು,‌ ದ್ರಾಕ್ಷಿ ಚಪ್ಪರದ ಚಪ್ಪಡಿಗಳು, ಪೆನ್ಸಿಂಗ್ ಮೆಶ್ ಬಲೆ, ದ್ರಾಕ್ಷಿಗೆ ಅಳವಡಿಸಿದ್ದ ಡ್ರಿಪ್ ಪೈಪುಗಳನ್ನು ಕತ್ತರಿಸಿ ನೆಳಕ್ಕುರುಳಿಸಿದ್ದಾರೆ.

ಸುಮಾರು ಇಪ್ಪತೈದು ಜನ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಕೃತ್ಯದಿಂದ ಸುಮಾರು ಹತ್ತು ಲಕ್ಷದಷ್ಟು ನಷ್ಟ ಹೊಂದಿರಬಹುದು ಎನ್ನಲಾಗಿದೆ.

ಈ ಕೃತ್ಯದ ಬಗ್ಗೆ ಮಾತನಾಡಿರುವ ಮಾಲೀಕ ನಾರಾಯಣಸ್ವಾಮಿ, ರಸ್ತೆ ವಿಚಾರವಾಗಿ ಅಕಾಶ್, ರತ್ನಮ್ಮ, ಶಿವಕುಮಾರ್ ಕುಟುಂಬದ ಜತೆ ವ್ಯಾಜ್ಯವಿತ್ತು. ಈ ಹಿಂದೆಯೂ ಸಹ ಒಮ್ಮೆ ಹೀಗಾಗಿತ್ತು. ಆ ದಿನ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರೂ ಕ್ರಮ ಜರುಗಿಸಲಿಲ್ಲ. ಅದೆ ದೈರ್ಯದ ಮೇಲೆ ಇವತ್ತು ಈ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಅಷ್ಟೊತ್ತಲ್ಲಿ ನಾವೇನಾದ್ರು ಅಡ್ಡಬಂದಿದ್ದರೆ ನಮಗೂ ಸಾವು ಕಾದಿತ್ತೇನೋ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ಕೊಟ್ಟಿದ್ದೇವೆ. ಈ ಬಾರಿಯಾದ್ರು ಈ ಘಟನೆಗೆ ಕಾರಣರಾದವನ್ನ, ಅವರ ಹಿಂಬಾಲಕರನ್ನ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಅವಲತ್ತುಕೊಂಡಿದ್ದಾರೆ.

ನಾರಾಯಣಸ್ವಾಮಿ ಪುತ್ರ ಪ್ರದೀಪ್ ಮಾತನಾಡಿ, ರಾಕ್ಷಸರು ಮಾಡೋ ಕೆಲಸ ಮಾಡಿದ್ದಾರೆ. ಅವರ ಜತೆ ಬಂದಿದ್ದಂತಹ ಎಲ್ಲ ಗ್ಯಾಂಗ್ ನ್ನು ಬಂಧಿಸಬೇಕು. ಅವರನ್ನ ಬೀದಿಯಲ್ಲಿ ಮೆರವಣಿಗೆ ಮಾಡಬೇಕು. ಹಾಕಿದ್ದ ಬಂಡವಾಳ ಕೈಗೆ ಸಿಗುತ್ತೆ ಅಂತ ಆಸೆಗಣ್ಣುಗಳಿಂದ ಕಾಯುತಿದ್ದ ವೇಳೆ ಫಸಲು ತುಂಬಿದ ದ್ರಾಕ್ಷಿಯನ್ನ ಕತ್ತರಿಸಿ ಬಿಸಾಕಿದ ದರುಳರನ್ನ ಕೂಡಲೆ ಬಂಧಿಸಿ ಕ್ರಮ ಜರುಗಿಸಬೇಕೆಂದು ಎಸ್ ಪಿ ಕುಶಾಲ್ ಚೌಕ್ಸೆಯಲ್ಲಿ ಮನವಿ ಮಾಡಿದ್ದಾರೆ.

ಇನ್ನೂ ನಂದಿಗಿರಿಧಾಮ ಪೊಲೀಸರು ದೂರು ಬಂದ ಕೂಡಲೆ ಎಚ್ವೆತ್ತುಕೊಂಡು ಈ ಕೃತ್ಯದಲ್ಲಿ ಪಾಲ್ಗೊಂಡವರನ್ನ ಬಂಧಿಸಿ ಅನ್ಯಾಯಕ್ಕೊಳಗಾದ ರೈತರ ಅಳಲಿಗೆ ಸ್ಪಂದಿಸುವರೆ ಕಾದು ನೋಡಬೇಕಿದೆ….

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

40 minutes ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

1 hour ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

2 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

2 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

3 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

11 hours ago