ದುಷ್ಕರ್ಮಿಗಳಿಂದ ಹೇಯ ಕೃತ್ಯ: ಫಸಲುಯುಕ್ತ ದ್ರಾಕ್ಷಿ ತೋಟ ನಾಶ

ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ ಮೂಲಕ ರೋಷಾವೇಶ ತೋರ್ಪಡಿಸಿಕೊಳ್ಳೋದು ಎಷ್ಟು ಸರಿ…. ಅಂತದೊಂದು ಘಟನೆಗೆ ತಡರಾತ್ರಿ ಚಿಕ್ಕಬಳ್ಳಾಪುರದ ಗ್ರಾಮವೊಂದರಲ್ಲಿ ನಡೆದಿದೆ….

ಚಿಕ್ಕಬಳ್ಳಾಪುರ ತಾಲ್ಲೂಕು ಕೊಂಡೇನಹಳ್ಳಿ-ಕಡಶೀಗನಹಳ್ಳಿ ಮಧ್ಯೆ ಇರುವ ಕಾಂತಮ್ಮ ನಾರಾಯಣಸ್ವಾಮಿ ಹೆಸರಿಗೆ ಸೇರಿದ ಎರಡು ಎಕರೆಯಲ್ಲಿ ಹಾಕಿದ್ದ ದ್ರಾಕ್ಷಿ ತೋಟ ಫಸಲಿಗೆ ಬಂದಿತ್ತು.

ತಡರಾತ್ರಿ ಏಕಾಏಕಿ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 50 ರಿಂದ 60 ದ್ರಾಕ್ಷಿ ಗಿಡಗಳು,‌ ದ್ರಾಕ್ಷಿ ಚಪ್ಪರದ ಚಪ್ಪಡಿಗಳು, ಪೆನ್ಸಿಂಗ್ ಮೆಶ್ ಬಲೆ, ದ್ರಾಕ್ಷಿಗೆ ಅಳವಡಿಸಿದ್ದ ಡ್ರಿಪ್ ಪೈಪುಗಳನ್ನು ಕತ್ತರಿಸಿ ನೆಳಕ್ಕುರುಳಿಸಿದ್ದಾರೆ.

ಸುಮಾರು ಇಪ್ಪತೈದು ಜನ ಈ ದುಷ್ಕೃತ್ಯದಲ್ಲಿ ಭಾಗಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಕೃತ್ಯದಿಂದ ಸುಮಾರು ಹತ್ತು ಲಕ್ಷದಷ್ಟು ನಷ್ಟ ಹೊಂದಿರಬಹುದು ಎನ್ನಲಾಗಿದೆ.

ಈ ಕೃತ್ಯದ ಬಗ್ಗೆ ಮಾತನಾಡಿರುವ ಮಾಲೀಕ ನಾರಾಯಣಸ್ವಾಮಿ, ರಸ್ತೆ ವಿಚಾರವಾಗಿ ಅಕಾಶ್, ರತ್ನಮ್ಮ, ಶಿವಕುಮಾರ್ ಕುಟುಂಬದ ಜತೆ ವ್ಯಾಜ್ಯವಿತ್ತು. ಈ ಹಿಂದೆಯೂ ಸಹ ಒಮ್ಮೆ ಹೀಗಾಗಿತ್ತು. ಆ ದಿನ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರೂ ಕ್ರಮ ಜರುಗಿಸಲಿಲ್ಲ. ಅದೆ ದೈರ್ಯದ ಮೇಲೆ ಇವತ್ತು ಈ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಅಷ್ಟೊತ್ತಲ್ಲಿ ನಾವೇನಾದ್ರು ಅಡ್ಡಬಂದಿದ್ದರೆ ನಮಗೂ ಸಾವು ಕಾದಿತ್ತೇನೋ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ಕೊಟ್ಟಿದ್ದೇವೆ. ಈ ಬಾರಿಯಾದ್ರು ಈ ಘಟನೆಗೆ ಕಾರಣರಾದವನ್ನ, ಅವರ ಹಿಂಬಾಲಕರನ್ನ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಅವಲತ್ತುಕೊಂಡಿದ್ದಾರೆ.

ನಾರಾಯಣಸ್ವಾಮಿ ಪುತ್ರ ಪ್ರದೀಪ್ ಮಾತನಾಡಿ, ರಾಕ್ಷಸರು ಮಾಡೋ ಕೆಲಸ ಮಾಡಿದ್ದಾರೆ. ಅವರ ಜತೆ ಬಂದಿದ್ದಂತಹ ಎಲ್ಲ ಗ್ಯಾಂಗ್ ನ್ನು ಬಂಧಿಸಬೇಕು. ಅವರನ್ನ ಬೀದಿಯಲ್ಲಿ ಮೆರವಣಿಗೆ ಮಾಡಬೇಕು. ಹಾಕಿದ್ದ ಬಂಡವಾಳ ಕೈಗೆ ಸಿಗುತ್ತೆ ಅಂತ ಆಸೆಗಣ್ಣುಗಳಿಂದ ಕಾಯುತಿದ್ದ ವೇಳೆ ಫಸಲು ತುಂಬಿದ ದ್ರಾಕ್ಷಿಯನ್ನ ಕತ್ತರಿಸಿ ಬಿಸಾಕಿದ ದರುಳರನ್ನ ಕೂಡಲೆ ಬಂಧಿಸಿ ಕ್ರಮ ಜರುಗಿಸಬೇಕೆಂದು ಎಸ್ ಪಿ ಕುಶಾಲ್ ಚೌಕ್ಸೆಯಲ್ಲಿ ಮನವಿ ಮಾಡಿದ್ದಾರೆ.

ಇನ್ನೂ ನಂದಿಗಿರಿಧಾಮ ಪೊಲೀಸರು ದೂರು ಬಂದ ಕೂಡಲೆ ಎಚ್ವೆತ್ತುಕೊಂಡು ಈ ಕೃತ್ಯದಲ್ಲಿ ಪಾಲ್ಗೊಂಡವರನ್ನ ಬಂಧಿಸಿ ಅನ್ಯಾಯಕ್ಕೊಳಗಾದ ರೈತರ ಅಳಲಿಗೆ ಸ್ಪಂದಿಸುವರೆ ಕಾದು ನೋಡಬೇಕಿದೆ….

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago