ದುಸ್ಥಿಯಲ್ಲಿರುವ ರಸ್ತೆಗಳನ್ನ ದುರಸ್ತಿ ಮಾಡುವುದನ್ನ ಬಿಟ್ಟು, ಸುಸ್ಥಿತಿಯಲ್ಲಿದ್ದ ರಸ್ತೆಯನ್ನ ಹಾಳು ಮಾಡಿ ಹೊಸದಾಗಿ ರಸ್ತೆ ಮಾಡುವ ಕರಾಮತ್ತು..!

ದೊಡ್ಡಬಳ್ಳಾಪುರ: ನಗರದಲ್ಲಿ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇಂದಿಗೂ ಹಲವು ಬಡಾವಣೆಗಳಲ್ಲಿ ಕಚ್ಛಾ ರಸ್ತೆಗಳೇ ಇವೆ. ಆದರೆ, ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡುವುದನ್ನ ಬಿಟ್ಟು, ಸುಸ್ಥಿತಿಯಲ್ಲಿದ್ದ ಸಿಮೆಂಟ್ ರಸ್ತೆಯನ್ನೇ ಕಿತ್ತು ಹಾಕಿ ಹೊಸದಾಗಿ ರಸ್ತೆ ಮಾಡುವ ಕರಾಮತ್ತು ನಡೆದಿದೆ.

ಶಾಂತಿನಗರದಲ್ಲಿ ಟ್ಯಾಂಕ್ ರಸ್ತೆಗೆ ಸಿಮೆಂಟ್ ಹಾಕಲಾಗಿತ್ತು. ಯಾವುದೇ ಗುಂಡಿಗಳಿಲ್ಲದೇ ರಸ್ತೆ ಸುಸ್ಥಿತಿಯಲ್ಲಿತ್ತು. ಹೀಗಿದ್ದರೂ ಶುಕ್ರವಾರ ರಸ್ತೆಯನ್ನು ಜೆಸಿಬಿ‌ ಮೂಲಕ ಕಿತ್ತು ಹಾಕಲಾಗಿದೆ. ಸಾರ್ವಜನಿಕರು ಈ ಕುರಿತು ಪ್ರಶ್ನಿಸಿದಾಗ, ನಾವು ಗುತ್ತಿಗೆದಾರರು ಹೇಳಿದ ಹಾಗೆ ಮಾಡಿದ್ದೇವೆ ಎಂದು ಕೆಲಸಗಾರರು ಹೇಳಿದ್ದಾರೆ.

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಜಿಲ್ಲಾಡಳಿತ ಹೊಸದಾಗಿ ರಸ್ತೆ ಮಾಡುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಟ್ಯಾಂಕ್ ರಸ್ತೆ ಉತ್ತಮವಾಗಿದ್ದರೂ ಕಿತ್ತುಹಾಕಿ ಹೊಸ ರಸ್ತೆ ಮಾಡುವ ಅನಿವಾರ್ಯತೆ ಏನಿತ್ತು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

2 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

15 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

16 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

16 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

16 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

18 hours ago