ದೊಡ್ಡಬಳ್ಳಾಪುರ: ನಗರದಲ್ಲಿ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇಂದಿಗೂ ಹಲವು ಬಡಾವಣೆಗಳಲ್ಲಿ ಕಚ್ಛಾ ರಸ್ತೆಗಳೇ ಇವೆ. ಆದರೆ, ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡುವುದನ್ನ ಬಿಟ್ಟು, ಸುಸ್ಥಿತಿಯಲ್ಲಿದ್ದ ಸಿಮೆಂಟ್ ರಸ್ತೆಯನ್ನೇ ಕಿತ್ತು ಹಾಕಿ ಹೊಸದಾಗಿ ರಸ್ತೆ ಮಾಡುವ ಕರಾಮತ್ತು ನಡೆದಿದೆ.
ಶಾಂತಿನಗರದಲ್ಲಿ ಟ್ಯಾಂಕ್ ರಸ್ತೆಗೆ ಸಿಮೆಂಟ್ ಹಾಕಲಾಗಿತ್ತು. ಯಾವುದೇ ಗುಂಡಿಗಳಿಲ್ಲದೇ ರಸ್ತೆ ಸುಸ್ಥಿತಿಯಲ್ಲಿತ್ತು. ಹೀಗಿದ್ದರೂ ಶುಕ್ರವಾರ ರಸ್ತೆಯನ್ನು ಜೆಸಿಬಿ ಮೂಲಕ ಕಿತ್ತು ಹಾಕಲಾಗಿದೆ. ಸಾರ್ವಜನಿಕರು ಈ ಕುರಿತು ಪ್ರಶ್ನಿಸಿದಾಗ, ನಾವು ಗುತ್ತಿಗೆದಾರರು ಹೇಳಿದ ಹಾಗೆ ಮಾಡಿದ್ದೇವೆ ಎಂದು ಕೆಲಸಗಾರರು ಹೇಳಿದ್ದಾರೆ.
ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಜಿಲ್ಲಾಡಳಿತ ಹೊಸದಾಗಿ ರಸ್ತೆ ಮಾಡುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…