ದೊಡ್ಡಬಳ್ಳಾಪುರ: ನಗರದಲ್ಲಿ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇಂದಿಗೂ ಹಲವು ಬಡಾವಣೆಗಳಲ್ಲಿ ಕಚ್ಛಾ ರಸ್ತೆಗಳೇ ಇವೆ. ಆದರೆ, ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡುವುದನ್ನ ಬಿಟ್ಟು, ಸುಸ್ಥಿತಿಯಲ್ಲಿದ್ದ ಸಿಮೆಂಟ್ ರಸ್ತೆಯನ್ನೇ ಕಿತ್ತು ಹಾಕಿ ಹೊಸದಾಗಿ ರಸ್ತೆ ಮಾಡುವ ಕರಾಮತ್ತು ನಡೆದಿದೆ.
ಶಾಂತಿನಗರದಲ್ಲಿ ಟ್ಯಾಂಕ್ ರಸ್ತೆಗೆ ಸಿಮೆಂಟ್ ಹಾಕಲಾಗಿತ್ತು. ಯಾವುದೇ ಗುಂಡಿಗಳಿಲ್ಲದೇ ರಸ್ತೆ ಸುಸ್ಥಿತಿಯಲ್ಲಿತ್ತು. ಹೀಗಿದ್ದರೂ ಶುಕ್ರವಾರ ರಸ್ತೆಯನ್ನು ಜೆಸಿಬಿ ಮೂಲಕ ಕಿತ್ತು ಹಾಕಲಾಗಿದೆ. ಸಾರ್ವಜನಿಕರು ಈ ಕುರಿತು ಪ್ರಶ್ನಿಸಿದಾಗ, ನಾವು ಗುತ್ತಿಗೆದಾರರು ಹೇಳಿದ ಹಾಗೆ ಮಾಡಿದ್ದೇವೆ ಎಂದು ಕೆಲಸಗಾರರು ಹೇಳಿದ್ದಾರೆ.
ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಜಿಲ್ಲಾಡಳಿತ ಹೊಸದಾಗಿ ರಸ್ತೆ ಮಾಡುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…