ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ- ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್

ಚಂದ್ರಯಾನ -2ರ ಸೋಲು ಕಲಿಸಿದ ಪಾಠದಿಂದ ನಾವು ಹೆಚ್ಚಿನ ಸಂಶೋಧನೆ ಹಾಗೂ ಪರಿಶ್ರಮದ ಮೂಲಕ ಚಂದ್ರಯಾ-3 ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಅಧ್ಯಕ್ಷ ಹಾಗೂ ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಹೇಳಿದರು.

ನಗರದ ಬೆಸೆಂಟ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶನಿವಾರ ಪ್ರಾರಂಭವಾದ ಎರಡು ದಿನಗಳ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರವನ್ನು ಬೆಂಕಿ ಹಚ್ಚದಲೇ ಕುಡಿಕೆಯಲ್ಲಿದ್ದ ಹಾಲಿಗೆ ರಾಸಾಯನಿಕ ಹಾಕುವ ಮೂಲಕ ಹಾಲನ್ನು ಹುಕ್ಕಿಸಿ ಮೂಲಕ ಚಾಲನೆ ನೀಡಿದರು.

ಭೂಮಿಯ ಹೊರಗಿನ ಇತರೆ ಗ್ರಹಗಳ ಬಗ್ಗೆ ನಮ್ಮಲ್ಲಿ ಇರುವ ಕುತೂಹಲಗಳನ್ನು ಚಂದ್ರಯಾನ-3 ತಣಿಸಲಿದೆ. ವಿಶ್ವದ ಇತರೆ ದೇಶಗಳು ಬಾಹ್ಯಾಕಾಶ ಸಂಶೋಧನೆಗಳನ್ನು ಮಿಲಿಟರಿ ಬಲ ವೃದ್ದಿಗಾಗಿ ಬಳಸಿಕೊಳ್ಳುತ್ತಾರೆ. ಆದರೆ ಭಾರತ ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಭೂ ಮಂಡಲ ಕುರಿತಂತೆ ಪ್ರತಿಯೊಬ್ಬರಲ್ಲೂ ಕುತೂಹಲಗಳು ಇವೆ. ವಿಜ್ಞಾನದ ಕಲಿಕೆಯನ್ನು ಹಲವಾರು ವಿಭಾಗಗಳಾಗಿ ಅಭ್ಯಾಸ ಮಾಡುವ ವಿಧಾನ ಸರಿಯಲ್ಲ. ಗಣಿತ, ಮಾನವೀಯ ಶಾಸ್ತ್ರಗಳನ್ನು ವಿಜ್ಞಾನ ಒಳಗೊಂಡಿರಬೇಕು. ಎಲ್ಲರಲ್ಲೂ ನಾಯಕತ್ವದ ಗುಣಗಳು ಇರಲಿವೆ. ಆದರೆ ಅವು ನಮ್ಮಲ್ಲಿ ರೂಢಿಗತವಾಗಲು ಕೇಳಿ ತಿಳಿಯುವ, ಪ್ರಯೋಗ ಮಾಡಿ ನೋಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ವಿಜ್ಞಾನ ಗ್ರಾಮದ ನೀಲನಕ್ಷೆ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪ ಹತ್ತು ಎಕರೆ ಪ್ರದೇಶದಲ್ಲಿ ವಿಜ್ಞಾನ ಗ್ರಾಮ ನಿರ್ಮಾಣಕ್ಕೆ ಲೋಕೊಪಯೋಗಿ ಇಲಾಖೆ ವತಿಯಿಂದ 5 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನು ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿಗಳಿಂದ ಕೊಡಿಸುವುದಾಗಿ ಭರವಸೆ ನೀಡಿದರು.

ಜನರ ಮುನ್ನಡೆಗೆ ವಿಜ್ಞಾನದ ಬೆಳಕು ಮುಖ್ಯ. ವೈಜ್ಞಾನಿಕ ಚಿಂತನೆಯ ಹೊಸ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ತಿಳಿವಳಿಕೆ ಮುಖ್ಯವಾಗಿದೆ. ಡಿಸೆಂಬರ್ 29 ರಂದು ರಾಯಚೂರಿನಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ದೇಶಕ್ಕೆ ಸಂದೇಶ ನೀಡುವಂತೆ ನಡೆಯಬೇಕಿದೆ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟಿಸಲು ಆಹ್ವಾನ ನೀಡಲಾಗುವುದು ಎಂದರು.

ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್, ವಿಜ್ಞಾನ ಗ್ರಾಮದ ಭೂಮಿ ದಾನಿಗಳಾದ ಆರ್. ರವಿ ಬಿಳಿಶಿವಾಲೆ, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪರಿಷತ್ ಉಪಾಧ್ಯಕ್ಷ ಡಾ.ಶ್ರೀರಾಮಚಂದ್ರ, ಕೆ.ಜಿ.ರಾವ್, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ, ಸಂಘನ ಕಾರ್ಯದರ್ಶಿ ವಿ.ಟಿ.ಸ್ವಾಮಿ ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

7 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago