ಚಂದ್ರಯಾನ -2ರ ಸೋಲು ಕಲಿಸಿದ ಪಾಠದಿಂದ ನಾವು ಹೆಚ್ಚಿನ ಸಂಶೋಧನೆ ಹಾಗೂ ಪರಿಶ್ರಮದ ಮೂಲಕ ಚಂದ್ರಯಾ-3 ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಅಧ್ಯಕ್ಷ ಹಾಗೂ ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಹೇಳಿದರು.
ನಗರದ ಬೆಸೆಂಟ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶನಿವಾರ ಪ್ರಾರಂಭವಾದ ಎರಡು ದಿನಗಳ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರವನ್ನು ಬೆಂಕಿ ಹಚ್ಚದಲೇ ಕುಡಿಕೆಯಲ್ಲಿದ್ದ ಹಾಲಿಗೆ ರಾಸಾಯನಿಕ ಹಾಕುವ ಮೂಲಕ ಹಾಲನ್ನು ಹುಕ್ಕಿಸಿ ಮೂಲಕ ಚಾಲನೆ ನೀಡಿದರು.
ಭೂಮಿಯ ಹೊರಗಿನ ಇತರೆ ಗ್ರಹಗಳ ಬಗ್ಗೆ ನಮ್ಮಲ್ಲಿ ಇರುವ ಕುತೂಹಲಗಳನ್ನು ಚಂದ್ರಯಾನ-3 ತಣಿಸಲಿದೆ. ವಿಶ್ವದ ಇತರೆ ದೇಶಗಳು ಬಾಹ್ಯಾಕಾಶ ಸಂಶೋಧನೆಗಳನ್ನು ಮಿಲಿಟರಿ ಬಲ ವೃದ್ದಿಗಾಗಿ ಬಳಸಿಕೊಳ್ಳುತ್ತಾರೆ. ಆದರೆ ಭಾರತ ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಭೂ ಮಂಡಲ ಕುರಿತಂತೆ ಪ್ರತಿಯೊಬ್ಬರಲ್ಲೂ ಕುತೂಹಲಗಳು ಇವೆ. ವಿಜ್ಞಾನದ ಕಲಿಕೆಯನ್ನು ಹಲವಾರು ವಿಭಾಗಗಳಾಗಿ ಅಭ್ಯಾಸ ಮಾಡುವ ವಿಧಾನ ಸರಿಯಲ್ಲ. ಗಣಿತ, ಮಾನವೀಯ ಶಾಸ್ತ್ರಗಳನ್ನು ವಿಜ್ಞಾನ ಒಳಗೊಂಡಿರಬೇಕು. ಎಲ್ಲರಲ್ಲೂ ನಾಯಕತ್ವದ ಗುಣಗಳು ಇರಲಿವೆ. ಆದರೆ ಅವು ನಮ್ಮಲ್ಲಿ ರೂಢಿಗತವಾಗಲು ಕೇಳಿ ತಿಳಿಯುವ, ಪ್ರಯೋಗ ಮಾಡಿ ನೋಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಜನರ ಮುನ್ನಡೆಗೆ ವಿಜ್ಞಾನದ ಬೆಳಕು ಮುಖ್ಯ. ವೈಜ್ಞಾನಿಕ ಚಿಂತನೆಯ ಹೊಸ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ತಿಳಿವಳಿಕೆ ಮುಖ್ಯವಾಗಿದೆ. ಡಿಸೆಂಬರ್ 29 ರಂದು ರಾಯಚೂರಿನಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ದೇಶಕ್ಕೆ ಸಂದೇಶ ನೀಡುವಂತೆ ನಡೆಯಬೇಕಿದೆ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟಿಸಲು ಆಹ್ವಾನ ನೀಡಲಾಗುವುದು ಎಂದರು.
ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್, ವಿಜ್ಞಾನ ಗ್ರಾಮದ ಭೂಮಿ ದಾನಿಗಳಾದ ಆರ್. ರವಿ ಬಿಳಿಶಿವಾಲೆ, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪರಿಷತ್ ಉಪಾಧ್ಯಕ್ಷ ಡಾ.ಶ್ರೀರಾಮಚಂದ್ರ, ಕೆ.ಜಿ.ರಾವ್, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ, ಸಂಘನ ಕಾರ್ಯದರ್ಶಿ ವಿ.ಟಿ.ಸ್ವಾಮಿ ಇದ್ದರು.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…