ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ- ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್

ಚಂದ್ರಯಾನ -2ರ ಸೋಲು ಕಲಿಸಿದ ಪಾಠದಿಂದ ನಾವು ಹೆಚ್ಚಿನ ಸಂಶೋಧನೆ ಹಾಗೂ ಪರಿಶ್ರಮದ ಮೂಲಕ ಚಂದ್ರಯಾ-3 ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಅಧ್ಯಕ್ಷ ಹಾಗೂ ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಹೇಳಿದರು.

ನಗರದ ಬೆಸೆಂಟ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶನಿವಾರ ಪ್ರಾರಂಭವಾದ ಎರಡು ದಿನಗಳ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರವನ್ನು ಬೆಂಕಿ ಹಚ್ಚದಲೇ ಕುಡಿಕೆಯಲ್ಲಿದ್ದ ಹಾಲಿಗೆ ರಾಸಾಯನಿಕ ಹಾಕುವ ಮೂಲಕ ಹಾಲನ್ನು ಹುಕ್ಕಿಸಿ ಮೂಲಕ ಚಾಲನೆ ನೀಡಿದರು.

ಭೂಮಿಯ ಹೊರಗಿನ ಇತರೆ ಗ್ರಹಗಳ ಬಗ್ಗೆ ನಮ್ಮಲ್ಲಿ ಇರುವ ಕುತೂಹಲಗಳನ್ನು ಚಂದ್ರಯಾನ-3 ತಣಿಸಲಿದೆ. ವಿಶ್ವದ ಇತರೆ ದೇಶಗಳು ಬಾಹ್ಯಾಕಾಶ ಸಂಶೋಧನೆಗಳನ್ನು ಮಿಲಿಟರಿ ಬಲ ವೃದ್ದಿಗಾಗಿ ಬಳಸಿಕೊಳ್ಳುತ್ತಾರೆ. ಆದರೆ ಭಾರತ ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಭೂ ಮಂಡಲ ಕುರಿತಂತೆ ಪ್ರತಿಯೊಬ್ಬರಲ್ಲೂ ಕುತೂಹಲಗಳು ಇವೆ. ವಿಜ್ಞಾನದ ಕಲಿಕೆಯನ್ನು ಹಲವಾರು ವಿಭಾಗಗಳಾಗಿ ಅಭ್ಯಾಸ ಮಾಡುವ ವಿಧಾನ ಸರಿಯಲ್ಲ. ಗಣಿತ, ಮಾನವೀಯ ಶಾಸ್ತ್ರಗಳನ್ನು ವಿಜ್ಞಾನ ಒಳಗೊಂಡಿರಬೇಕು. ಎಲ್ಲರಲ್ಲೂ ನಾಯಕತ್ವದ ಗುಣಗಳು ಇರಲಿವೆ. ಆದರೆ ಅವು ನಮ್ಮಲ್ಲಿ ರೂಢಿಗತವಾಗಲು ಕೇಳಿ ತಿಳಿಯುವ, ಪ್ರಯೋಗ ಮಾಡಿ ನೋಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ವಿಜ್ಞಾನ ಗ್ರಾಮದ ನೀಲನಕ್ಷೆ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪ ಹತ್ತು ಎಕರೆ ಪ್ರದೇಶದಲ್ಲಿ ವಿಜ್ಞಾನ ಗ್ರಾಮ ನಿರ್ಮಾಣಕ್ಕೆ ಲೋಕೊಪಯೋಗಿ ಇಲಾಖೆ ವತಿಯಿಂದ 5 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನು ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿಗಳಿಂದ ಕೊಡಿಸುವುದಾಗಿ ಭರವಸೆ ನೀಡಿದರು.

ಜನರ ಮುನ್ನಡೆಗೆ ವಿಜ್ಞಾನದ ಬೆಳಕು ಮುಖ್ಯ. ವೈಜ್ಞಾನಿಕ ಚಿಂತನೆಯ ಹೊಸ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ತಿಳಿವಳಿಕೆ ಮುಖ್ಯವಾಗಿದೆ. ಡಿಸೆಂಬರ್ 29 ರಂದು ರಾಯಚೂರಿನಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ದೇಶಕ್ಕೆ ಸಂದೇಶ ನೀಡುವಂತೆ ನಡೆಯಬೇಕಿದೆ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟಿಸಲು ಆಹ್ವಾನ ನೀಡಲಾಗುವುದು ಎಂದರು.

ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್, ವಿಜ್ಞಾನ ಗ್ರಾಮದ ಭೂಮಿ ದಾನಿಗಳಾದ ಆರ್. ರವಿ ಬಿಳಿಶಿವಾಲೆ, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪರಿಷತ್ ಉಪಾಧ್ಯಕ್ಷ ಡಾ.ಶ್ರೀರಾಮಚಂದ್ರ, ಕೆ.ಜಿ.ರಾವ್, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ, ಸಂಘನ ಕಾರ್ಯದರ್ಶಿ ವಿ.ಟಿ.ಸ್ವಾಮಿ ಇದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

6 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

7 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

19 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

22 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago