ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ- ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್

ಚಂದ್ರಯಾನ -2ರ ಸೋಲು ಕಲಿಸಿದ ಪಾಠದಿಂದ ನಾವು ಹೆಚ್ಚಿನ ಸಂಶೋಧನೆ ಹಾಗೂ ಪರಿಶ್ರಮದ ಮೂಲಕ ಚಂದ್ರಯಾ-3 ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಅಧ್ಯಕ್ಷ ಹಾಗೂ ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಹೇಳಿದರು.

ನಗರದ ಬೆಸೆಂಟ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶನಿವಾರ ಪ್ರಾರಂಭವಾದ ಎರಡು ದಿನಗಳ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರವನ್ನು ಬೆಂಕಿ ಹಚ್ಚದಲೇ ಕುಡಿಕೆಯಲ್ಲಿದ್ದ ಹಾಲಿಗೆ ರಾಸಾಯನಿಕ ಹಾಕುವ ಮೂಲಕ ಹಾಲನ್ನು ಹುಕ್ಕಿಸಿ ಮೂಲಕ ಚಾಲನೆ ನೀಡಿದರು.

ಭೂಮಿಯ ಹೊರಗಿನ ಇತರೆ ಗ್ರಹಗಳ ಬಗ್ಗೆ ನಮ್ಮಲ್ಲಿ ಇರುವ ಕುತೂಹಲಗಳನ್ನು ಚಂದ್ರಯಾನ-3 ತಣಿಸಲಿದೆ. ವಿಶ್ವದ ಇತರೆ ದೇಶಗಳು ಬಾಹ್ಯಾಕಾಶ ಸಂಶೋಧನೆಗಳನ್ನು ಮಿಲಿಟರಿ ಬಲ ವೃದ್ದಿಗಾಗಿ ಬಳಸಿಕೊಳ್ಳುತ್ತಾರೆ. ಆದರೆ ಭಾರತ ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಭೂ ಮಂಡಲ ಕುರಿತಂತೆ ಪ್ರತಿಯೊಬ್ಬರಲ್ಲೂ ಕುತೂಹಲಗಳು ಇವೆ. ವಿಜ್ಞಾನದ ಕಲಿಕೆಯನ್ನು ಹಲವಾರು ವಿಭಾಗಗಳಾಗಿ ಅಭ್ಯಾಸ ಮಾಡುವ ವಿಧಾನ ಸರಿಯಲ್ಲ. ಗಣಿತ, ಮಾನವೀಯ ಶಾಸ್ತ್ರಗಳನ್ನು ವಿಜ್ಞಾನ ಒಳಗೊಂಡಿರಬೇಕು. ಎಲ್ಲರಲ್ಲೂ ನಾಯಕತ್ವದ ಗುಣಗಳು ಇರಲಿವೆ. ಆದರೆ ಅವು ನಮ್ಮಲ್ಲಿ ರೂಢಿಗತವಾಗಲು ಕೇಳಿ ತಿಳಿಯುವ, ಪ್ರಯೋಗ ಮಾಡಿ ನೋಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ವಿಜ್ಞಾನ ಗ್ರಾಮದ ನೀಲನಕ್ಷೆ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪ ಹತ್ತು ಎಕರೆ ಪ್ರದೇಶದಲ್ಲಿ ವಿಜ್ಞಾನ ಗ್ರಾಮ ನಿರ್ಮಾಣಕ್ಕೆ ಲೋಕೊಪಯೋಗಿ ಇಲಾಖೆ ವತಿಯಿಂದ 5 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನು ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿಗಳಿಂದ ಕೊಡಿಸುವುದಾಗಿ ಭರವಸೆ ನೀಡಿದರು.

ಜನರ ಮುನ್ನಡೆಗೆ ವಿಜ್ಞಾನದ ಬೆಳಕು ಮುಖ್ಯ. ವೈಜ್ಞಾನಿಕ ಚಿಂತನೆಯ ಹೊಸ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ತಿಳಿವಳಿಕೆ ಮುಖ್ಯವಾಗಿದೆ. ಡಿಸೆಂಬರ್ 29 ರಂದು ರಾಯಚೂರಿನಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ದೇಶಕ್ಕೆ ಸಂದೇಶ ನೀಡುವಂತೆ ನಡೆಯಬೇಕಿದೆ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟಿಸಲು ಆಹ್ವಾನ ನೀಡಲಾಗುವುದು ಎಂದರು.

ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್, ವಿಜ್ಞಾನ ಗ್ರಾಮದ ಭೂಮಿ ದಾನಿಗಳಾದ ಆರ್. ರವಿ ಬಿಳಿಶಿವಾಲೆ, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪರಿಷತ್ ಉಪಾಧ್ಯಕ್ಷ ಡಾ.ಶ್ರೀರಾಮಚಂದ್ರ, ಕೆ.ಜಿ.ರಾವ್, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ, ಸಂಘನ ಕಾರ್ಯದರ್ಶಿ ವಿ.ಟಿ.ಸ್ವಾಮಿ ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

11 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

11 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

12 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

17 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

23 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago