ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ- ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್

ಚಂದ್ರಯಾನ -2ರ ಸೋಲು ಕಲಿಸಿದ ಪಾಠದಿಂದ ನಾವು ಹೆಚ್ಚಿನ ಸಂಶೋಧನೆ ಹಾಗೂ ಪರಿಶ್ರಮದ ಮೂಲಕ ಚಂದ್ರಯಾ-3 ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಅಧ್ಯಕ್ಷ ಹಾಗೂ ಇಸ್ರೊ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಹೇಳಿದರು.

ನಗರದ ಬೆಸೆಂಟ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶನಿವಾರ ಪ್ರಾರಂಭವಾದ ಎರಡು ದಿನಗಳ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರವನ್ನು ಬೆಂಕಿ ಹಚ್ಚದಲೇ ಕುಡಿಕೆಯಲ್ಲಿದ್ದ ಹಾಲಿಗೆ ರಾಸಾಯನಿಕ ಹಾಕುವ ಮೂಲಕ ಹಾಲನ್ನು ಹುಕ್ಕಿಸಿ ಮೂಲಕ ಚಾಲನೆ ನೀಡಿದರು.

ಭೂಮಿಯ ಹೊರಗಿನ ಇತರೆ ಗ್ರಹಗಳ ಬಗ್ಗೆ ನಮ್ಮಲ್ಲಿ ಇರುವ ಕುತೂಹಲಗಳನ್ನು ಚಂದ್ರಯಾನ-3 ತಣಿಸಲಿದೆ. ವಿಶ್ವದ ಇತರೆ ದೇಶಗಳು ಬಾಹ್ಯಾಕಾಶ ಸಂಶೋಧನೆಗಳನ್ನು ಮಿಲಿಟರಿ ಬಲ ವೃದ್ದಿಗಾಗಿ ಬಳಸಿಕೊಳ್ಳುತ್ತಾರೆ. ಆದರೆ ಭಾರತ ದೂರಸಂಪರ್ಕವು ಸೇರಿದಂತೆ ಮಾನವನ ಪ್ರಗತಿಗಾಗಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಭೂ ಮಂಡಲ ಕುರಿತಂತೆ ಪ್ರತಿಯೊಬ್ಬರಲ್ಲೂ ಕುತೂಹಲಗಳು ಇವೆ. ವಿಜ್ಞಾನದ ಕಲಿಕೆಯನ್ನು ಹಲವಾರು ವಿಭಾಗಗಳಾಗಿ ಅಭ್ಯಾಸ ಮಾಡುವ ವಿಧಾನ ಸರಿಯಲ್ಲ. ಗಣಿತ, ಮಾನವೀಯ ಶಾಸ್ತ್ರಗಳನ್ನು ವಿಜ್ಞಾನ ಒಳಗೊಂಡಿರಬೇಕು. ಎಲ್ಲರಲ್ಲೂ ನಾಯಕತ್ವದ ಗುಣಗಳು ಇರಲಿವೆ. ಆದರೆ ಅವು ನಮ್ಮಲ್ಲಿ ರೂಢಿಗತವಾಗಲು ಕೇಳಿ ತಿಳಿಯುವ, ಪ್ರಯೋಗ ಮಾಡಿ ನೋಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ವಿಜ್ಞಾನ ಗ್ರಾಮದ ನೀಲನಕ್ಷೆ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪ ಹತ್ತು ಎಕರೆ ಪ್ರದೇಶದಲ್ಲಿ ವಿಜ್ಞಾನ ಗ್ರಾಮ ನಿರ್ಮಾಣಕ್ಕೆ ಲೋಕೊಪಯೋಗಿ ಇಲಾಖೆ ವತಿಯಿಂದ 5 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನು ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿಗಳಿಂದ ಕೊಡಿಸುವುದಾಗಿ ಭರವಸೆ ನೀಡಿದರು.

ಜನರ ಮುನ್ನಡೆಗೆ ವಿಜ್ಞಾನದ ಬೆಳಕು ಮುಖ್ಯ. ವೈಜ್ಞಾನಿಕ ಚಿಂತನೆಯ ಹೊಸ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ತಿಳಿವಳಿಕೆ ಮುಖ್ಯವಾಗಿದೆ. ಡಿಸೆಂಬರ್ 29 ರಂದು ರಾಯಚೂರಿನಲ್ಲಿ ನಡೆಯಲಿರುವ 3ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ದೇಶಕ್ಕೆ ಸಂದೇಶ ನೀಡುವಂತೆ ನಡೆಯಬೇಕಿದೆ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟಿಸಲು ಆಹ್ವಾನ ನೀಡಲಾಗುವುದು ಎಂದರು.

ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜ್, ವಿಜ್ಞಾನ ಗ್ರಾಮದ ಭೂಮಿ ದಾನಿಗಳಾದ ಆರ್. ರವಿ ಬಿಳಿಶಿವಾಲೆ, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಪರಿಷತ್ ಉಪಾಧ್ಯಕ್ಷ ಡಾ.ಶ್ರೀರಾಮಚಂದ್ರ, ಕೆ.ಜಿ.ರಾವ್, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ, ಸಂಘನ ಕಾರ್ಯದರ್ಶಿ ವಿ.ಟಿ.ಸ್ವಾಮಿ ಇದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago