ದೂರು ನೀಡಿದ ದಲಿತ ಕುಟುಂಬದ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ದೊಡ್ಡಬಳ್ಳಾಪುರ : ಜಮೀನು ವಂಚನೆ ವಿರುದ್ಧ ದೂರು ದಾಖಲಿಸಿದಕ್ಕೆ, ದಲಿತ ಮಹಿಳೆಯರ ಮೇಲೆ ಪೆಟ್ರೋಲ್ ಸುರಿದು ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದ ನರಸಮ್ಮ ಮತ್ತು ಮಮತಾ ಎಂಬ ಮಹಿಳೆಯರ ಮೇಲೆ ದೊಣ್ಣೆ ಮತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ‌.

ಸದ್ಯ ಹಲ್ಲೆಗೊಳಗಾದ ಮಹಿಳೆಯರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೊಳಗಾದ ನರಸಮ್ಮ ಮತ್ತು ಮಮತಾ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಇವರಿಗೆ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ಪಿತ್ರಾರ್ಜಿತವಾಗಿ ಬಂದಿದ್ದ 3 ಎಕರೆ ಜಮೀನು ಇದೆ, 3 ಎಕರೆ ಜಮೀನು ನಂಬಿಕೊಂಡು ಮೂರು ಕುಟುಂಬಗಳ 80ಕ್ಕೂ ಹೆಚ್ಚು ಜನರು ಜೀವನ ಮಾಡುತ್ತಿದ್ದಾರೆ, ಇದೇ ಜಮೀನು ಕಬಳಿಸಲು ಇದೇ ಗ್ರಾಮದ ನರಸೇಗೌಡ, ನರಸಿಂಹಸ್ವಾಮಿ ಮತ್ತು ಲಕ್ಷ್ಮೀಪತಿ ಸಂಚು ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ನರಸೇಗೌಡ ಕುಟುಂಬ ನಮ್ಮ ಕುಟುಂಬಕ್ಕೆ ಸೇರಿದ 3 ಎಕರೆ ಜಮೀನನ್ನು ವಂಚಿಸಿದ್ದಾರೆಂದು ನರಸಮ್ಮ ಅವರ ಪತಿ ಚಿಕ್ಕಪ್ಪ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 23ರಂದು ಪ್ರಕರಣ ದಾಖಲು ಮಾಡಿದ್ದರು, ಪೊಲೀಸ್ ಠಾಣೆಯಲ್ಲಿ ದೂರು ನೀಡಿದಕ್ಕೆ ಕೆರಳಿದ ನರಸೇಗೌಡ ಕುಟುಂಬ ನನ್ನ ಮತ್ತು ತಂಗಿಯಾದ ಮಮತಾರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ನರಸಮ್ಮ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಡಿಸೆಂಬರ್ 24ರ ಬೆಳಗ್ಗೆ 10 ಗಂಟೆ ಸಮಯದಲ್ಲಿ ನರಸಮ್ಮ ಮತ್ತು ಮಮತಾ ತಮ್ಮ ಜಮೀನಿಗೆ ಹೋದಾಗ, ನರಸಿಂಹಸ್ವಾಮಿ, ಲಕ್ಷ್ಮೀಪತಿ ಎಂಬುವರು ಟ್ರ್ಯಾಕ್ಟರ್ ಗೆ ಸೌದೆಯನ್ನ ತುಂಬುತ್ತಿದ್ದರು, ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದಲ್ಲದೆ ತಮಗೆ ಸೇರಿದೆ ಸೌದೆಗಳನ್ನ ಟ್ರ್ಯಾಕ್ಟರ್ ಗೆ ತುಂಬುತ್ತಿರುವ ಬಗ್ಗೆ ನರಸಮ್ಮ ಪ್ರಶ್ನೆ ಮಾಡಿದ್ದಾರೆ.

ನರಸೇಗೌಡ, ನರಸಿಂಹಸ್ವಾಮಿ ಮತ್ತು ಲಕ್ಷ್ಮೀಪತಿ ಎಂಬುವರು ಜಾತಿ ನಿಂದನೆ ಮಾಡಿದ್ದಾರೆ, ನಮ್ಮ ಕುಟುಂಬದ ವಿರುದ್ಧ ದೂರು ನೀಡುತ್ತಿರಾ, ನಿಮ್ಮನ್ನು ಟ್ರ್ಯಾಕ್ಟರ್ ನಿಂದ ಗುದ್ದಿ ಸಾಯಿಸುವುದ್ದಾಗಿ ಜೀವ ಬೆದರಿಕೆ ಹಾಕಿದ್ದಾರೆ, ನಮ್ಮ ಮೈ ಮೇಲೆ ಪೆಟ್ರೋಲ್ ಸುರಿದು ದೊಣ್ಣೆ ಮತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ, ಬೆಂಕಿ ಹಚ್ಚುವ ಯತ್ನ ಮಾಡಿದ್ದಾಗ ಅಲ್ಲಿಂದ ಓಡಿ ಹೋಗಿದ್ದು, ಸುತ್ತಮುತ್ತಲಿನ ಜನ ಬರುವಷ್ಟರಲ್ಲಿ ಟ್ರ್ಯಾಕ್ಟರ್ ನನ್ನ ಅಲ್ಲಿಯೇ ಬಿಟ್ಟು ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆಂದು ಆರೋಪಿಸಿ ಹಲ್ಲೆಗೊಳಗಾದವರು ದೂರು ನೀಡಿದ್ದಾರೆ.

ನರಸಮ್ಮ ಮತ್ತು ಮಮತಾ ದಲಿತ ಸಮುದಾಯಕ್ಕೆ ಸೇರಿದ್ದು, ಜೀವ ಬೆದರಿಕೆ ಮತ್ತು ಹಲ್ಲೆ ನಡೆಸುವ ಮೂಲಕ ನರಸೇಗೌಡ, ನರಸಿಂಹಸ್ವಾಮಿ ಮತ್ತು ಲಕ್ಷ್ಮೀಪತಿ ದಲಿತರ ಜಮೀನು ಹೊಡೆಯುವ ಸಂಚು ನಡೆಸಿದ್ದಾರೆ, ಅವರು ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

38 minutes ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

12 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

13 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

14 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

16 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

23 hours ago