ದೂರು ನೀಡಿದ ದಲಿತ ಕುಟುಂಬದ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ದೊಡ್ಡಬಳ್ಳಾಪುರ : ಜಮೀನು ವಂಚನೆ ವಿರುದ್ಧ ದೂರು ದಾಖಲಿಸಿದಕ್ಕೆ, ದಲಿತ ಮಹಿಳೆಯರ ಮೇಲೆ ಪೆಟ್ರೋಲ್ ಸುರಿದು ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದ ನರಸಮ್ಮ ಮತ್ತು ಮಮತಾ ಎಂಬ ಮಹಿಳೆಯರ ಮೇಲೆ ದೊಣ್ಣೆ ಮತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ‌.

ಸದ್ಯ ಹಲ್ಲೆಗೊಳಗಾದ ಮಹಿಳೆಯರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೊಳಗಾದ ನರಸಮ್ಮ ಮತ್ತು ಮಮತಾ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಇವರಿಗೆ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ಪಿತ್ರಾರ್ಜಿತವಾಗಿ ಬಂದಿದ್ದ 3 ಎಕರೆ ಜಮೀನು ಇದೆ, 3 ಎಕರೆ ಜಮೀನು ನಂಬಿಕೊಂಡು ಮೂರು ಕುಟುಂಬಗಳ 80ಕ್ಕೂ ಹೆಚ್ಚು ಜನರು ಜೀವನ ಮಾಡುತ್ತಿದ್ದಾರೆ, ಇದೇ ಜಮೀನು ಕಬಳಿಸಲು ಇದೇ ಗ್ರಾಮದ ನರಸೇಗೌಡ, ನರಸಿಂಹಸ್ವಾಮಿ ಮತ್ತು ಲಕ್ಷ್ಮೀಪತಿ ಸಂಚು ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ನರಸೇಗೌಡ ಕುಟುಂಬ ನಮ್ಮ ಕುಟುಂಬಕ್ಕೆ ಸೇರಿದ 3 ಎಕರೆ ಜಮೀನನ್ನು ವಂಚಿಸಿದ್ದಾರೆಂದು ನರಸಮ್ಮ ಅವರ ಪತಿ ಚಿಕ್ಕಪ್ಪ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 23ರಂದು ಪ್ರಕರಣ ದಾಖಲು ಮಾಡಿದ್ದರು, ಪೊಲೀಸ್ ಠಾಣೆಯಲ್ಲಿ ದೂರು ನೀಡಿದಕ್ಕೆ ಕೆರಳಿದ ನರಸೇಗೌಡ ಕುಟುಂಬ ನನ್ನ ಮತ್ತು ತಂಗಿಯಾದ ಮಮತಾರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ನರಸಮ್ಮ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಡಿಸೆಂಬರ್ 24ರ ಬೆಳಗ್ಗೆ 10 ಗಂಟೆ ಸಮಯದಲ್ಲಿ ನರಸಮ್ಮ ಮತ್ತು ಮಮತಾ ತಮ್ಮ ಜಮೀನಿಗೆ ಹೋದಾಗ, ನರಸಿಂಹಸ್ವಾಮಿ, ಲಕ್ಷ್ಮೀಪತಿ ಎಂಬುವರು ಟ್ರ್ಯಾಕ್ಟರ್ ಗೆ ಸೌದೆಯನ್ನ ತುಂಬುತ್ತಿದ್ದರು, ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದಲ್ಲದೆ ತಮಗೆ ಸೇರಿದೆ ಸೌದೆಗಳನ್ನ ಟ್ರ್ಯಾಕ್ಟರ್ ಗೆ ತುಂಬುತ್ತಿರುವ ಬಗ್ಗೆ ನರಸಮ್ಮ ಪ್ರಶ್ನೆ ಮಾಡಿದ್ದಾರೆ.

ನರಸೇಗೌಡ, ನರಸಿಂಹಸ್ವಾಮಿ ಮತ್ತು ಲಕ್ಷ್ಮೀಪತಿ ಎಂಬುವರು ಜಾತಿ ನಿಂದನೆ ಮಾಡಿದ್ದಾರೆ, ನಮ್ಮ ಕುಟುಂಬದ ವಿರುದ್ಧ ದೂರು ನೀಡುತ್ತಿರಾ, ನಿಮ್ಮನ್ನು ಟ್ರ್ಯಾಕ್ಟರ್ ನಿಂದ ಗುದ್ದಿ ಸಾಯಿಸುವುದ್ದಾಗಿ ಜೀವ ಬೆದರಿಕೆ ಹಾಕಿದ್ದಾರೆ, ನಮ್ಮ ಮೈ ಮೇಲೆ ಪೆಟ್ರೋಲ್ ಸುರಿದು ದೊಣ್ಣೆ ಮತ್ತು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ, ಬೆಂಕಿ ಹಚ್ಚುವ ಯತ್ನ ಮಾಡಿದ್ದಾಗ ಅಲ್ಲಿಂದ ಓಡಿ ಹೋಗಿದ್ದು, ಸುತ್ತಮುತ್ತಲಿನ ಜನ ಬರುವಷ್ಟರಲ್ಲಿ ಟ್ರ್ಯಾಕ್ಟರ್ ನನ್ನ ಅಲ್ಲಿಯೇ ಬಿಟ್ಟು ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆಂದು ಆರೋಪಿಸಿ ಹಲ್ಲೆಗೊಳಗಾದವರು ದೂರು ನೀಡಿದ್ದಾರೆ.

ನರಸಮ್ಮ ಮತ್ತು ಮಮತಾ ದಲಿತ ಸಮುದಾಯಕ್ಕೆ ಸೇರಿದ್ದು, ಜೀವ ಬೆದರಿಕೆ ಮತ್ತು ಹಲ್ಲೆ ನಡೆಸುವ ಮೂಲಕ ನರಸೇಗೌಡ, ನರಸಿಂಹಸ್ವಾಮಿ ಮತ್ತು ಲಕ್ಷ್ಮೀಪತಿ ದಲಿತರ ಜಮೀನು ಹೊಡೆಯುವ ಸಂಚು ನಡೆಸಿದ್ದಾರೆ, ಅವರು ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

7 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

7 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

8 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

9 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

10 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

14 hours ago