Categories: ಕೋಲಾರ

ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು: ಮೃತಪಟ್ಟಿರುವ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು. ಮೃತಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕಾಗಿ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕೆಂದು ರಾಜ್ಯ ಹೆದ್ದಾರಿ ಹಂಚಾಳ ಗೇಟ್ ಮುಳ್ಳು ಕಂಬಿಗಳ ಸಮೇತ ಬಂದ್ ಮಾಡಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿರುವ ಪ್ರಜ್ಞಾವಂತ ರಾಜಕಾರಣಿಗಳೇ ಪ್ರಜಾಪ್ರಭುತ್ವದಲ್ಲಿ ರೈತರು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿ ಕಡೆ ಬರಬಾರದೆ? ರೈತರೇನೂ ದೇಶದ್ರೋಹಿಗಳೇ, ಎಲ್ಲಾ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ದಬ್ಬಾಳಿಕೆ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಹಿಟ್ಲರ್ ಧೋರಣೆ ಅಲ್ಲವೇ ಎಂದು ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ರೈತ ವಿರೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರದಲ್ಲಿ ಶೇ.60 ರಷ್ಟು ಉದ್ಯೋಗ ಸೃಷ್ಠಿ ಮಾಡುವ ರೈತರಿಗೆ ಯಾವುದೇ ವೇತನವಿಲ್ಲ, ಪಿಂಚಣಿ ಇಲ್ಲ, 135 ಕೋಟಿ ಜನರ ಹೊಟ್ಟೆ ತುಂಬಿಸಲು 24 ಗಂಟೆ ದುಡಿದು ಬೆವರು ಸುರಿಸುವ ಅನ್ನದಾತನ ಬೆವರಿಗೆ ತಕ್ಕ ಬೆಲೆ ನೀಡಬೇಕಾದ ಜವಬ್ಧಾರಿ ಸರ್ಕಾರಗಳ ಮೇಲಿದೆ, ಆ ಜವಬ್ಧಾರಿಯನ್ನು ಮರೆತು ಅನ್ನದ ಬೆಲೆ ಗೊತ್ತಿಲ್ಲದ ಅವಿವೇಕಿಗಳಂತೆ ರೈತರ ಮೇಲಿನ ದೌರ್ಜನ್ಯ ನಿಲ್ಲದೇ ಇದ್ದರೆ ರೈತರಿಂದಲೇ 3ನೇ ಮಹಾಯುದ್ದ ಕೃಷಿ ಕ್ಷೇತ್ರ ಉಳಿವಿಗಾಗಿ ಪ್ರಾರಂಭವಾಗುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರ ಡಾ.ಎಂ.ಎಸ್ ಸ್ವಾಮೀನಾಥನ್ ವರದಿಯಂತೆ ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದಂತೆ ಕೃಷಿ ವಲಯಕ್ಕೂ ಆದ್ಯತೆ ನೀಡಬೇಕು. ಭೂಮಿ, ಕೃಷಿ ಪರಿಕರ, ಬಿತ್ತನೆ ಬೀಜ , ಗೊಬ್ಬರ, ಉಳುವೆ ಎಲ್ಲಕ್ಕೂ ಹೂಡಿದ ಬಂಡವಾಳ ಹಾಗೂ ಪಟ್ಟ ಶ್ರಮ ಎಲ್ಲವನ್ನು ಪರಿಗಣಿಸಿ ಅವರ ಒಟ್ಟು ಹೂಡಿಕೆಯಲ್ಲಿ ಶೇ.50 ರಷ್ಟು ಆದಾಯ ಬಂದರೆ ದೇಶದಲ್ಲಿ ಹಸಿರು ಕ್ರಾಂತಿ ಆಗುತ್ತದೆ. ಜೊತೆಗೆ 2020 ರಲ್ಲಿ ದಾಖಲಿಸಿದ ರೈತರ ಮೇಲೆ ಪ್ರಕರಣಗಳು ವಾಪಸ್ ಪಡೆಯಬೇಕು ರೈತ ವಿರೋಧಿ ಕಾಯ್ದೆಗಳು ವಾಪಸ್ ಆಗಬೇಕು, ರೈತರಿಗೆ ಪಿಂಚಣಿ ಸೇರಿದಂತೆ ವಿವಿದ ಬೇಡಿಕೆಗಳನ್ನು ಸರ್ಕಾರ ನ್ಯಾಯಯುತವಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.

ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಕರೆ ಕೊಟ್ಟಿರುವ ಫೆ.27 ರ ಮಂಗಳವಾರ ಗ್ರಾಮೀಣ ರಸ್ತೆ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಬಂಗಾರಪೇಟೆ ಹಂಚಾಳ ಗೇಟ್ ಬಂದ್ ಮಾಡುವ ಮೂಲಕ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಮೃತ ಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿತರಣೆ ಮಾಡುವಂತೆ ನ್ಯಾಯಯುತ ಶಾಂತಿಯುತ ಪರಿಹಾರಕ್ಕಾಗಿ ಒತ್ತಾಯ ಮಾಡುವ ತಿರ್ಮಾನ ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಮೂರಾಂಡಹಳ್ಳಿ ಶಿವಾರೆಡ್ಡಿ, ಕದರಿನತ್ತ ಅಪ್ಪೋಜಿರಾವ್, ಕಿರಣ್, ಚಾಂದ್‌ಪಾಷ, ಮುನಿಕೃಷ್ಣ, ಚಂದ್ರಪ್ಪ,  ಶೈಲಜ, ರತ್ನಮ್ಮ, ಸುಗುಣ, ಶೋಭ, ಮುನಿಯಮ್ಮ, ಮುಂತಾದವರಿದ್ದರು,

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

4 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

11 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

14 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

15 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago