Categories: ಕೋಲಾರ

ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು: ಮೃತಪಟ್ಟಿರುವ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು. ಮೃತಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕಾಗಿ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕೆಂದು ರಾಜ್ಯ ಹೆದ್ದಾರಿ ಹಂಚಾಳ ಗೇಟ್ ಮುಳ್ಳು ಕಂಬಿಗಳ ಸಮೇತ ಬಂದ್ ಮಾಡಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿರುವ ಪ್ರಜ್ಞಾವಂತ ರಾಜಕಾರಣಿಗಳೇ ಪ್ರಜಾಪ್ರಭುತ್ವದಲ್ಲಿ ರೈತರು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿ ಕಡೆ ಬರಬಾರದೆ? ರೈತರೇನೂ ದೇಶದ್ರೋಹಿಗಳೇ, ಎಲ್ಲಾ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ದಬ್ಬಾಳಿಕೆ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಹಿಟ್ಲರ್ ಧೋರಣೆ ಅಲ್ಲವೇ ಎಂದು ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ರೈತ ವಿರೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರದಲ್ಲಿ ಶೇ.60 ರಷ್ಟು ಉದ್ಯೋಗ ಸೃಷ್ಠಿ ಮಾಡುವ ರೈತರಿಗೆ ಯಾವುದೇ ವೇತನವಿಲ್ಲ, ಪಿಂಚಣಿ ಇಲ್ಲ, 135 ಕೋಟಿ ಜನರ ಹೊಟ್ಟೆ ತುಂಬಿಸಲು 24 ಗಂಟೆ ದುಡಿದು ಬೆವರು ಸುರಿಸುವ ಅನ್ನದಾತನ ಬೆವರಿಗೆ ತಕ್ಕ ಬೆಲೆ ನೀಡಬೇಕಾದ ಜವಬ್ಧಾರಿ ಸರ್ಕಾರಗಳ ಮೇಲಿದೆ, ಆ ಜವಬ್ಧಾರಿಯನ್ನು ಮರೆತು ಅನ್ನದ ಬೆಲೆ ಗೊತ್ತಿಲ್ಲದ ಅವಿವೇಕಿಗಳಂತೆ ರೈತರ ಮೇಲಿನ ದೌರ್ಜನ್ಯ ನಿಲ್ಲದೇ ಇದ್ದರೆ ರೈತರಿಂದಲೇ 3ನೇ ಮಹಾಯುದ್ದ ಕೃಷಿ ಕ್ಷೇತ್ರ ಉಳಿವಿಗಾಗಿ ಪ್ರಾರಂಭವಾಗುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರ ಡಾ.ಎಂ.ಎಸ್ ಸ್ವಾಮೀನಾಥನ್ ವರದಿಯಂತೆ ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದಂತೆ ಕೃಷಿ ವಲಯಕ್ಕೂ ಆದ್ಯತೆ ನೀಡಬೇಕು. ಭೂಮಿ, ಕೃಷಿ ಪರಿಕರ, ಬಿತ್ತನೆ ಬೀಜ , ಗೊಬ್ಬರ, ಉಳುವೆ ಎಲ್ಲಕ್ಕೂ ಹೂಡಿದ ಬಂಡವಾಳ ಹಾಗೂ ಪಟ್ಟ ಶ್ರಮ ಎಲ್ಲವನ್ನು ಪರಿಗಣಿಸಿ ಅವರ ಒಟ್ಟು ಹೂಡಿಕೆಯಲ್ಲಿ ಶೇ.50 ರಷ್ಟು ಆದಾಯ ಬಂದರೆ ದೇಶದಲ್ಲಿ ಹಸಿರು ಕ್ರಾಂತಿ ಆಗುತ್ತದೆ. ಜೊತೆಗೆ 2020 ರಲ್ಲಿ ದಾಖಲಿಸಿದ ರೈತರ ಮೇಲೆ ಪ್ರಕರಣಗಳು ವಾಪಸ್ ಪಡೆಯಬೇಕು ರೈತ ವಿರೋಧಿ ಕಾಯ್ದೆಗಳು ವಾಪಸ್ ಆಗಬೇಕು, ರೈತರಿಗೆ ಪಿಂಚಣಿ ಸೇರಿದಂತೆ ವಿವಿದ ಬೇಡಿಕೆಗಳನ್ನು ಸರ್ಕಾರ ನ್ಯಾಯಯುತವಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.

ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಕರೆ ಕೊಟ್ಟಿರುವ ಫೆ.27 ರ ಮಂಗಳವಾರ ಗ್ರಾಮೀಣ ರಸ್ತೆ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಬಂಗಾರಪೇಟೆ ಹಂಚಾಳ ಗೇಟ್ ಬಂದ್ ಮಾಡುವ ಮೂಲಕ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಮೃತ ಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿತರಣೆ ಮಾಡುವಂತೆ ನ್ಯಾಯಯುತ ಶಾಂತಿಯುತ ಪರಿಹಾರಕ್ಕಾಗಿ ಒತ್ತಾಯ ಮಾಡುವ ತಿರ್ಮಾನ ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಮೂರಾಂಡಹಳ್ಳಿ ಶಿವಾರೆಡ್ಡಿ, ಕದರಿನತ್ತ ಅಪ್ಪೋಜಿರಾವ್, ಕಿರಣ್, ಚಾಂದ್‌ಪಾಷ, ಮುನಿಕೃಷ್ಣ, ಚಂದ್ರಪ್ಪ,  ಶೈಲಜ, ರತ್ನಮ್ಮ, ಸುಗುಣ, ಶೋಭ, ಮುನಿಯಮ್ಮ, ಮುಂತಾದವರಿದ್ದರು,

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

7 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

7 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

10 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

11 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

14 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

19 hours ago