Categories: ಕೋಲಾರ

ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು: ಮೃತಪಟ್ಟಿರುವ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು. ಮೃತಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕಾಗಿ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕೆಂದು ರಾಜ್ಯ ಹೆದ್ದಾರಿ ಹಂಚಾಳ ಗೇಟ್ ಮುಳ್ಳು ಕಂಬಿಗಳ ಸಮೇತ ಬಂದ್ ಮಾಡಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿರುವ ಪ್ರಜ್ಞಾವಂತ ರಾಜಕಾರಣಿಗಳೇ ಪ್ರಜಾಪ್ರಭುತ್ವದಲ್ಲಿ ರೈತರು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿ ಕಡೆ ಬರಬಾರದೆ? ರೈತರೇನೂ ದೇಶದ್ರೋಹಿಗಳೇ, ಎಲ್ಲಾ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ದಬ್ಬಾಳಿಕೆ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಹಿಟ್ಲರ್ ಧೋರಣೆ ಅಲ್ಲವೇ ಎಂದು ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ರೈತ ವಿರೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರದಲ್ಲಿ ಶೇ.60 ರಷ್ಟು ಉದ್ಯೋಗ ಸೃಷ್ಠಿ ಮಾಡುವ ರೈತರಿಗೆ ಯಾವುದೇ ವೇತನವಿಲ್ಲ, ಪಿಂಚಣಿ ಇಲ್ಲ, 135 ಕೋಟಿ ಜನರ ಹೊಟ್ಟೆ ತುಂಬಿಸಲು 24 ಗಂಟೆ ದುಡಿದು ಬೆವರು ಸುರಿಸುವ ಅನ್ನದಾತನ ಬೆವರಿಗೆ ತಕ್ಕ ಬೆಲೆ ನೀಡಬೇಕಾದ ಜವಬ್ಧಾರಿ ಸರ್ಕಾರಗಳ ಮೇಲಿದೆ, ಆ ಜವಬ್ಧಾರಿಯನ್ನು ಮರೆತು ಅನ್ನದ ಬೆಲೆ ಗೊತ್ತಿಲ್ಲದ ಅವಿವೇಕಿಗಳಂತೆ ರೈತರ ಮೇಲಿನ ದೌರ್ಜನ್ಯ ನಿಲ್ಲದೇ ಇದ್ದರೆ ರೈತರಿಂದಲೇ 3ನೇ ಮಹಾಯುದ್ದ ಕೃಷಿ ಕ್ಷೇತ್ರ ಉಳಿವಿಗಾಗಿ ಪ್ರಾರಂಭವಾಗುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರ ಡಾ.ಎಂ.ಎಸ್ ಸ್ವಾಮೀನಾಥನ್ ವರದಿಯಂತೆ ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದಂತೆ ಕೃಷಿ ವಲಯಕ್ಕೂ ಆದ್ಯತೆ ನೀಡಬೇಕು. ಭೂಮಿ, ಕೃಷಿ ಪರಿಕರ, ಬಿತ್ತನೆ ಬೀಜ , ಗೊಬ್ಬರ, ಉಳುವೆ ಎಲ್ಲಕ್ಕೂ ಹೂಡಿದ ಬಂಡವಾಳ ಹಾಗೂ ಪಟ್ಟ ಶ್ರಮ ಎಲ್ಲವನ್ನು ಪರಿಗಣಿಸಿ ಅವರ ಒಟ್ಟು ಹೂಡಿಕೆಯಲ್ಲಿ ಶೇ.50 ರಷ್ಟು ಆದಾಯ ಬಂದರೆ ದೇಶದಲ್ಲಿ ಹಸಿರು ಕ್ರಾಂತಿ ಆಗುತ್ತದೆ. ಜೊತೆಗೆ 2020 ರಲ್ಲಿ ದಾಖಲಿಸಿದ ರೈತರ ಮೇಲೆ ಪ್ರಕರಣಗಳು ವಾಪಸ್ ಪಡೆಯಬೇಕು ರೈತ ವಿರೋಧಿ ಕಾಯ್ದೆಗಳು ವಾಪಸ್ ಆಗಬೇಕು, ರೈತರಿಗೆ ಪಿಂಚಣಿ ಸೇರಿದಂತೆ ವಿವಿದ ಬೇಡಿಕೆಗಳನ್ನು ಸರ್ಕಾರ ನ್ಯಾಯಯುತವಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.

ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಕರೆ ಕೊಟ್ಟಿರುವ ಫೆ.27 ರ ಮಂಗಳವಾರ ಗ್ರಾಮೀಣ ರಸ್ತೆ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಬಂಗಾರಪೇಟೆ ಹಂಚಾಳ ಗೇಟ್ ಬಂದ್ ಮಾಡುವ ಮೂಲಕ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಮೃತ ಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿತರಣೆ ಮಾಡುವಂತೆ ನ್ಯಾಯಯುತ ಶಾಂತಿಯುತ ಪರಿಹಾರಕ್ಕಾಗಿ ಒತ್ತಾಯ ಮಾಡುವ ತಿರ್ಮಾನ ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಮೂರಾಂಡಹಳ್ಳಿ ಶಿವಾರೆಡ್ಡಿ, ಕದರಿನತ್ತ ಅಪ್ಪೋಜಿರಾವ್, ಕಿರಣ್, ಚಾಂದ್‌ಪಾಷ, ಮುನಿಕೃಷ್ಣ, ಚಂದ್ರಪ್ಪ,  ಶೈಲಜ, ರತ್ನಮ್ಮ, ಸುಗುಣ, ಶೋಭ, ಮುನಿಯಮ್ಮ, ಮುಂತಾದವರಿದ್ದರು,

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

4 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

10 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago