Categories: ಕೋಲಾರ

ದೆಹಲಿಯಲ್ಲಿ ಬಿಜೆಪಿ ಗದ್ದುಗೆ: ಕೋಲಾರದಲ್ಲಿ ವಿಜಯೋತ್ಸವ

ಕೋಲಾರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಕೂಡ ಆರು ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನವನ್ನು ಗೆಲ್ಲುವಲ್ಲಿ ಶ್ರಮ ವಹಿಸಲಾಗುತ್ತದೆ, ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತಂದರೆ ಬಗೆಹರಿಸಲಾಗುವುದು. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಕಾರ್ಯಕರ್ತನ ಸ್ಥಾನ ಶಾಶ್ವತವಾಗಿರುತ್ತದೆ ನಾನು ಜಿಲ್ಲಾಧ್ಯಕ್ಷನಾದರೂ ನಾನು ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ದೇಶದಲ್ಲಿ 18 ಕೋಟಿ ಸದಸ್ಯತ್ವ ಪಡೆದು ಹೆಚ್ಚು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಏಕೈಕ ಪಕ್ಷ‌ ಬಿಜೆಪಿಯಾಗಿದ್ದು ಸಕ್ರಿಯವಾಗಿ ನಾವೆಲ್ಲ ಒಗ್ಗಟ್ಟಾಗಿ ದುಡಿಯೋಣ ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಎಸ್.ಬಿ ಮುನಿವೆಂಕಟಪ್ಪ, ಬಿ.ವಿ ಮಹೇಶ್, ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಹೊಸರಾಯಪ್ಪ, ನಗರ ಘಟಕದ ಅಧ್ಯಕ್ಷ ಸಾ.ಮಾ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಆರ್.ಎನ್ ಹನುಮಂತಪ್ಪ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಅರುಣಮ್ಮ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಮಮತಮ್ಮ ಹಿರಿಯ ಮುಖಂಡರಾದ ಜಗದೀಶ್ವಾಚಾರಿ, ಸುರೇಶ್, ಗಾಂಧಿನಗರ ವೆಂಕಟೇಶ್, ಅಲ್ಪಸಂಖ್ಯಾತರ ಘಟಕದ ಅಕ್ಮಲ್ ಪಾಷ, ರಾಜೇಶ್, ನಟರಾಜ್, ನಾಗೇಂದ್ರ, ಹಾರೋಹಳ್ಳಿ ನಾರಾಯಣಸ್ವಾಮಿ ಪದ್ಮಮ್ಮ ರಾಮಚಂದ್ರ ಮುಂತಾದವರು ಇದ್ದು, ವಿಜಯೋತ್ಸವದ ನಂತರ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

Ramesh Babu

Journalist

Share
Published by
Ramesh Babu

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

2 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

16 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

17 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago