Categories: ಕೋಲಾರ

ದೆಹಲಿಯಲ್ಲಿ ಬಿಜೆಪಿ ಗದ್ದುಗೆ: ಕೋಲಾರದಲ್ಲಿ ವಿಜಯೋತ್ಸವ

ಕೋಲಾರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಕೂಡ ಆರು ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನವನ್ನು ಗೆಲ್ಲುವಲ್ಲಿ ಶ್ರಮ ವಹಿಸಲಾಗುತ್ತದೆ, ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತಂದರೆ ಬಗೆಹರಿಸಲಾಗುವುದು. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಕಾರ್ಯಕರ್ತನ ಸ್ಥಾನ ಶಾಶ್ವತವಾಗಿರುತ್ತದೆ ನಾನು ಜಿಲ್ಲಾಧ್ಯಕ್ಷನಾದರೂ ನಾನು ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ದೇಶದಲ್ಲಿ 18 ಕೋಟಿ ಸದಸ್ಯತ್ವ ಪಡೆದು ಹೆಚ್ಚು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಏಕೈಕ ಪಕ್ಷ‌ ಬಿಜೆಪಿಯಾಗಿದ್ದು ಸಕ್ರಿಯವಾಗಿ ನಾವೆಲ್ಲ ಒಗ್ಗಟ್ಟಾಗಿ ದುಡಿಯೋಣ ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಎಸ್.ಬಿ ಮುನಿವೆಂಕಟಪ್ಪ, ಬಿ.ವಿ ಮಹೇಶ್, ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಹೊಸರಾಯಪ್ಪ, ನಗರ ಘಟಕದ ಅಧ್ಯಕ್ಷ ಸಾ.ಮಾ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಆರ್.ಎನ್ ಹನುಮಂತಪ್ಪ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಅರುಣಮ್ಮ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಮಮತಮ್ಮ ಹಿರಿಯ ಮುಖಂಡರಾದ ಜಗದೀಶ್ವಾಚಾರಿ, ಸುರೇಶ್, ಗಾಂಧಿನಗರ ವೆಂಕಟೇಶ್, ಅಲ್ಪಸಂಖ್ಯಾತರ ಘಟಕದ ಅಕ್ಮಲ್ ಪಾಷ, ರಾಜೇಶ್, ನಟರಾಜ್, ನಾಗೇಂದ್ರ, ಹಾರೋಹಳ್ಳಿ ನಾರಾಯಣಸ್ವಾಮಿ ಪದ್ಮಮ್ಮ ರಾಮಚಂದ್ರ ಮುಂತಾದವರು ಇದ್ದು, ವಿಜಯೋತ್ಸವದ ನಂತರ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

3 minutes ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

17 minutes ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

11 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

13 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

14 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

14 hours ago